Home » ಪಡಿತರ ಚೀಟಿದಾರರೇ ನಿಮಗೊಂದು ಸಿಹಿಸುದ್ದಿ| ಇನ್ನು ಮುಂದೆ ಈ ಎಲ್ಲಾ ಸೇವೆಗಳು ನಿಮ್ಮ ನ್ಯಾಯಬೆಲೆ ಅಂಗಡಿಗಳಲ್ಲಿ ಸಿಗಲಿವೆ !!!

ಪಡಿತರ ಚೀಟಿದಾರರೇ ನಿಮಗೊಂದು ಸಿಹಿಸುದ್ದಿ| ಇನ್ನು ಮುಂದೆ ಈ ಎಲ್ಲಾ ಸೇವೆಗಳು ನಿಮ್ಮ ನ್ಯಾಯಬೆಲೆ ಅಂಗಡಿಗಳಲ್ಲಿ ಸಿಗಲಿವೆ !!!

by Mallika
0 comments

ಬೆಂಗಳೂರು : ಪಡಿತರ ಚೀಟಿದಾರರಿಗೊಂದು ಸಿಹಿಸುದ್ದಿ ಇದೆ. ಇನ್ನು ಮುಂದೆ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಜೊತೆಗೆ ಇನ್ನು ಮುಂದೆ ಎಲ್ ಪಿ ಜಿ ಸಿಲಿಂಡರ್, ಪಿಂಚಣಿ ಸೌಲಭ್ಯ ಸೇರಿದಂತೆ ಹಲವು ಸೌಲಭ್ಯಗಳು ದೊರೆಯಲಿವೆ.

ನ್ಯಾಯಬೆಲೆ ಅಂಗಡಿಗಳು ಇನ್ಮುಂದೆ ಸಾಮಾನ್ಯ ಸೇವಾ ಕೇಂದ್ರಗಳಾಗಿ ಕಾರ್ಯನಿರ್ವಹಿಸಲಿವೆ. ಕೇಂದ್ರ ಮತ್ತು ಸರ್ಕಾರದ ಅನೇಕ ಯೋಜನೆಗಳನ್ನು ಜನರಿಗೆ ತಲುಪಿಸಲು ರಾಜ್ಯ ಸರ್ಕಾರ ಈ ಕ್ರಮ ಕೈಗೊಂಡಿದೆ.

ಹಾಗಾಗಿ ಇನ್ನು ಮುಂದೆ ನ್ಯಾಯಬೆಲೆ ಅಂಗಡಿಗಳಲ್ಲಿ ಅಕ್ಕಿ, ಗೋಧಿ ಜೊತೆಗೆ ಎಲ್ ಪಿಜಿ ಸಿಲಿಂಡರ್, ಪಿಂಚಣಿ ಸೇರಿದಂತೆ ಹಲವು ಸೌಲಭ್ಯಗಳು ಜನರಿಗೆ ಸಿಗಲಿವೆ ಎನ್ನಲಾಗಿದೆ.

ಈ ಯೋಜನೆಯಡಿ ಜನರು ಇನ್ಮುಂದೆ ತಾಲೂಕು, ಜಿಲ್ಲಾ ಕೇಂದ್ರಗಳಿಗೆ ಅಲೆದಾಡ ಬೇಕಾಗಿಲ್ಲ. ತಮ್ಮ ಸಮೀಪದ ನ್ಯಾಯಬೆಲೆ ಅಂಗಡಿಗಳಲ್ಲಿ ಬ್ಯಾಂಕ್, ಅಂಚೆ ಇಲಾಖೆ, ಹಣಕಾಸು ಸೇವೆಗಳು, ವಿಧವಾ ವೇತನಾ, ಸಂಧ್ಯಾ ಸುರಕ್ಷಾ, ಪಿಂಚಣಿ, ಫೋನ್ ಬಿಲ್. ವಿದ್ಯುತ್ ಬಿಲ್ ಪಾವತಿ, ಪಾನ್ ಕಾರ್ಡ್, ಪಾಸ್ ಪೋರ್ಟ್ ಸೇರಿದಂತೆ ಹಲವು ಸೌಲಭ್ಯಗಳನ್ನು ಪಡೆಯಬಹುದು. ಈ ಯೋಜನೆ ಪೂರ್ಣ ಪ್ರಮಾಣದಲ್ಲಿ ಜಾರಿಗೆ ಬರುವ ಸಾಧ್ಯತೆ ಇದೆ ಎನ್ನಲಾಗಿದೆ.

banner

You may also like

Leave a Comment