Home Karnataka State Politics Updates Congress: ವಿಧಾನ ಪರಿಷತ್ ಕಾಂಗ್ರೆಸ್ ಅಭ್ಯರ್ಥಿಗಳಾಗಲು 1 ಲಕ್ಷ ದೇಣಿಗೆ ಕಡ್ಡಾಯ

Congress: ವಿಧಾನ ಪರಿಷತ್ ಕಾಂಗ್ರೆಸ್ ಅಭ್ಯರ್ಥಿಗಳಾಗಲು 1 ಲಕ್ಷ ದೇಣಿಗೆ ಕಡ್ಡಾಯ

Hindu neighbor gifts plot of land

Hindu neighbour gifts land to Muslim journalist

Congress: ರಾಜ್ಯ ವಿಧಾನ ಪರಿಷತ್ ಗೆ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳಿಂದ ತಲಾ ಎರಡು ಸ್ಥಾನಗಳಿಗೆ 2026ರ ನವೆಂಬರ್ ನಲ್ಲಿ ನಡೆಯುವ ಚುನಾವಣೆಗೆ ಆಡಳಿತಾರೂಢ ಕಾಂಗ್ರೆಸ್ (Congress) ಪಕ್ಷ ತಯಾರಿ ಆರಂಭಿಸಿದೆ.

ಪಕ್ಷದ ಅಭ್ಯರ್ಥಿಗಳಾಗಲು ಆಕಾಂಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಗಳಾಗಲು ಆಸಕ್ತಿ ಹೊಂದಿದವರು ಒಂದು ಲಕ್ಷ ರೂಪಾಯಿ ದೇಣಿಗೆ ಮೊತ್ತದ ಡಿಡಿಯೊಂದಿಗೆ ಅರ್ಜಿ ಸಲ್ಲಿಸಲು ನವೆಂಬರ್ 1ರವರೆಗೆ ಕಾಲಾವಕಾಶ ನೀಡಲಾಗಿದೆ.

ಪಶ್ಚಿಮ ಪದವೀಧರ ಕ್ಷೇತ್ರ, ಆಗ್ನೇಯ ಪದವೀಧರ ಕ್ಷೇತ್ರ, ಈಶಾನ್ಯ ಶಿಕ್ಷಕರ ಕ್ಷೇತ್ರ, ಬೆಂಗಳೂರು ಶಿಕ್ಷಕರ ಕ್ಷೇತ್ರ ಸೇರಿ 4 ಕ್ಷೇತ್ರಗಳ ಸದಸ್ಯರ ಅವಧಿ 2026ರ ನವೆಂಬರ್ ಗೆ ಅಂತ್ಯವಾಗಲಿದ್ದು, ಈ ಕ್ಷೇತ್ರಗಳಿಗೆ ಹೊಸ ಸದಸ್ಯರ ಆಯ್ಕೆಗೆ ಚುನಾವಣೆ ನಡೆಯಲಿದೆ.