Home ಸುದ್ದಿ Indraprastha: ದೆಹಲಿ ಹೆಸರು ಬದಲಾಯಿಸಲು ಅಮಿತ್‌ ಶಾಗೆ ಮನವಿ

Indraprastha: ದೆಹಲಿ ಹೆಸರು ಬದಲಾಯಿಸಲು ಅಮಿತ್‌ ಶಾಗೆ ಮನವಿ

Amith shah

Hindu neighbor gifts plot of land

Hindu neighbour gifts land to Muslim journalist

Indraprastha: ದೆಹಲಿಯ ಚಾಂದಿನಿ ಚೌಕ್ ಬಿಜೆಪಿ ಸಂಸದ ಪ್ರವೀಣ್‌ ಖಂಡೇಲ್‌ವಾಲ್‌ ಕೇಂದ್ರ ಗೃಹಸಚಿವ ಅಮಿತ್‌ ಶಾ (Amit Shah) ಅವರಿಗೆ ಪತ್ರ ಬರೆದು ದೆಹಲಿಯ ಹೆಸರು ಬದಲಾಯಿಸಿ ಇಂದ್ರಪ್ರಸ್ಥ ಎಂದು ಮರುನಾಮಕರಣ ಮಾಡುವಂತೆ ಒತ್ತಾಯಿಸಿದ್ದಾರೆ.

ಭಾರತದ ಆತ್ಮ ಮತ್ತು ಐತಿಹಾಸಿಕ ಸಂಪ್ರದಾಯದ ಪುನರುಜ್ಜೀವನದ ಸಂಕೇತವಾಗಲಿದೆ ಎಂದು ಪ್ರವೀಣ್‌ ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಮಹಾಭಾರತದ ಸಮಯದಲ್ಲಿ ಪಾಂಡವರು ಯಮುನಾ ನಧಿಯ ದಡದಲ್ಲಿ ಇಂದ್ರಪ್ರಸ್ಥ ಎಂಬ ರಾಜಧಾನಿಯನ್ನು ಸ್ಥಾಪಿಸಿದ್ದರು ಎನ್ನುವುದಕ್ಕೆ ಸಾಕ್ಷಿಯಿದೆ ಎಂದು ಈ ಪತ್ರದಲ್ಲಿ ಪ್ರವೀಣ್‌ ಖಂಡೇಲ್ವಾಲ್‌ (Praveen Khandelwal) ಪ್ರಸ್ತಾಪಿಸಿದ್ದಾರೆ. ನಂತರ ಈ ನಗರವು ವ್ಯಾಪಾರ, ಸಂಸ್ಕೃತಿ ಮತ್ತು ಆಡಳಿತದ ಕೇಂದ್ರವಾಯಿತು. ಸುಲ್ತಾನರು ಮತ್ತು ಮೊಘಲರ ಅವಧಿಯಲ್ಲಿ, ಈ ಹೆಸರು ದೆಹಲಿಯಾಗಿ ಬದಲಾಯಿತು. 1911 ರಲ್ಲಿ, ಬ್ರಿಟಿಷ್ ಆಳ್ವಿಕೆಯು ನವದೆಹಲಿಯನ್ನು ರಾಜಧಾನಿಯಾಗಿ ಘೋಷಿಸಿತು ಎಂದು ಪತ್ರದಲ್ಲಿ ಹೇಳಿದ್ದಾರೆ.

ಏನೇನು ಬದಲಾಗಬೇಕು..?

ಗೃಹ ಸಚಿವ ಅಮಿತ್ ಶಾ ಅವರಿಗೆ ಬರೆದ ಪತ್ರದಲ್ಲಿ ಪ್ರವೀಣ್ ಖಂಡೇಲ್ವಾಲ್ 4 ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ.

1. ಭಾರತದ ರಾಜಧಾನಿ ದೆಹಲಿಯ ಹೆಸರನ್ನು ಇಂದ್ರಪ್ರಸ್ಥ ಎಂದು ಬದಲಾಯಿಸಬೇಕು.

2. ಹಳೆ ದೆಹಲಿ ರೈಲು ನಿಲ್ದಾಣವನ್ನು ಇಂದ್ರಪ್ರಸ್ಥ ಜಂಕ್ಷನ್ ಎಂದು ಮರುನಾಮಕರಣ ಮಾಡಬೇಕು.

3. ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಇಂದ್ರಪ್ರಸ್ಥ ವಿಮಾನ ನಿಲ್ದಾಣ ಎಂದು ಮರುನಾಮಕರಣ ಮಾಡಬೇಕು.

4. ದೆಹಲಿಯ ಯಾವುದಾದರೂ ಒಂದು ಪ್ರಮುಖ ಸ್ಥಳದಲ್ಲಿ ಪಾಂಡವರ ಭವ್ಯ ಪ್ರತಿಮೆಗಳನ್ನು ಸ್ಥಾಪಿಸಬೇಕು.