ಹಿರೇಬಂಡಾಡಿ ಸರಕಾರಿ ಪ್ರೌಢ ಶಾಲೆಯ ಪೋಷಕ ರೊಂದಿಗೆ ಸಂವಾದ : ಮಠ0ದೂರು ಭಾಗಿ

ಶಾಸಕರ ಹುಟ್ಟೂರಿನ ಸರಕಾರಿ ಪ್ರೌಢಶಾಲೆ, ಹಿರೇಬಂಡಾಡಿ ಇಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉನ್ನತ ಫಲಿತಾಂಶವನ್ನು ಪಡೆಯುವ ದೃಷ್ಟಿಯಿಂದ ವಿದ್ಯಾರ್ಥಿಗಳು ಮತ್ತು ಫೋಷಕರೊಂದಿಗೆ ಸಂವಾದ ಕಾರ್ಯಕ್ರಮವನ್ನು ಪುತ್ತೂರಿನ ಶಾಸಕರೂ ಮತ್ತು ಶಾಲಾಭಿವೃಧ್ಧಿ ಸಮಿತಿಯ ಅಧ್ಯಕ್ಷರಾದ  ಸಂಜೀವ ಮಠಂದೂರುರವರು ನಡೆಸಿದರು.

ಸಭೆಯಲ್ಲಿ ತಾಲೂಕು ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷರು ಸಾಜ ರಾಧಾಕೃಷ್ಣ ಆಳ್ವ, ಹಿರೇಬಂಡಾಡಿ ಗ್ರಾಮಪಂಚಾಯತ್ ಅಧ್ಯಕ್ಷರಾದ ಶೌಕತ್ ಅಲಿ, ಶಾಲಾಭಿವೃಧ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷರಾದ ಶ್ರೀಧರ್ ಮಠಂದೂರು, ಶಾಲಾ ಮುಖ್ಯ ಗುರುಗಳು ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

Leave A Reply

Your email address will not be published.