ಸರ್ವೆ ಶ್ರೀ ಷಣ್ಮುಖ ಯುವಕ ಮಂಡಲ | ಸ್ವಚ್ಚ ಭಾರತ್ ಸಮ್ಮರ್ ಇಂಟರ್ನ್‌ಶಿಪ್‌ | ಜಿಲ್ಲೆಗೆ ಪ್ರಥಮ,ರಾಜ್ಯಕ್ಕೆ ದ್ವಿತೀಯ

ಪುತ್ತೂರು : ಸರ್ವೆ ಶ್ರೀ ಷಣ್ಮುಖ ಯುವಕ ಮಂಡಲಕ್ಕೆ ‘ಸ್ವಚ್ಛ ಭಾರತ ಸಮ್ಮರ್ ಇಂಟರ್ನ್ಶಿಪ್’ ಅಭಿಯಾನದಲ್ಲಿ ಸತತ ಎರಡನೇ ವರ್ಷ ಜಿಲ್ಲಾ ಮಟ್ಟದ ಪ್ರಥಮ ಸ್ಥಾನ ಹಾಗು ರಾಜ್ಯ ಮಟ್ಟದ ದ್ವಿತೀಯ ಸ್ಥಾನ ಹಾಗು 60,000 ರೂಗಳ ನಗದು ಬಹುಮಾನ ವನ್ನು ಇಂದು ಮಂಗಳೂರಿನಲ್ಲಿ ನಡೆದ ಜಿಲ್ಲಾ ಯುವ ಸಮಾವೇಶದಲ್ಲಿ ಶಾಸಕರಾದ ವೇದವ್ಯಾಸ್ ಕಾಮತ್ ನೀಡಿ ಗೌರವಿಸಿದರು.

ತಾಲೂಕು ಯುವಜನ ಒಕ್ಕೂಟದ ಅಧ್ಯಕ್ಷರು ಹಾಗು ಯುವಕ ಮಂಡಲದ ಮಾಜಿ ಅಧ್ಯಕ್ಷರಾದ ಸುಬ್ರಹ್ಮಣ್ಯ ಕರಂಬಾರು, ಅಧ್ಯಕ್ಷರಾದ ಕಮಲೇಶ್ ಸರ್ವೆದೋಳಗುತ್ತು, ಕಾರ್ಯದರ್ಶಿ ತಿಲಕ್ ರಾಜ್ ಕರಂಬಾರು, ಜೊತೆ ಕಾರ್ಯದರ್ಶಿ ಗುರುರಾಜ್ ಪಟ್ಟೆ ಮಜಲು, ಸಂಘಟನಾ ಕಾರ್ಯದರ್ಶಿ ಮನೋಜ್ ಸುವರ್ಣ ಸೊರಕೆ, ಕ್ರೀಡಾ ಕಾರ್ಯದರ್ಶಿ ಕಿಶೋರ್ ಸರ್ವೆದೋಳಗುತ್ತು ಪ್ರಶಸ್ತಿ ಸ್ವೀಕರಿಸಿದರು.

‘ಪುರುಷರ’ಕಟ್ಟೇಲಿ ಹುಡುಗಿಯರೂ ಇದ್ದಾರೆ !

Leave A Reply

Your email address will not be published.