ಉಳತ್ತೋಡಿ ಷಣ್ಮುಖ ದೇವಸ್ಥಾನದಲ್ಲಿ ಕರಸೇವೆ । ವಳಕಡಮ ಶ್ರೀದೇವಿ ಭಜನಾ ಮಂದಿರ ಸದಸ್ಯರಿಂದ

ಹಿರೇಬಂಡಾಡಿ : ಜೀರ್ಣೋದ್ಧಾರಗೊಳ್ಳುತ್ತಿರುವ ಉಳತ್ತೋಡಿ ಷಣ್ಮುಖ ದೇವಸ್ಥಾನ, ಹಿರೇಬಂಡಾಡಿ ಇದರ ಕರಸೇವೆಯು ನಿನ್ನೆ ವಳಕಡಮ ಶ್ರೀದೇವಿ ಭಜನಾ ಮಂದಿರ ಸದಸ್ಯರಿಂದ ನಡೆಯಿತು. ತಾ. 15 ರ ಸಂಜೆ 6 ಗಂಟೆಗೆ ಪ್ರಾರಂಭವಾದ ಕರಸೇವೆಯು ರಾತ್ರಿ 10 ರವರೆಗೆ ನಡೆದಿತ್ತು.

ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ಗಣೇಶ್ ಮಠ೦ದೂರು ಅವರು ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಜನಾರ್ಧನ ಗೌಡ ಸಾಂತಿತ್ತಡ್ಡ, ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ದೇವಪ್ಪ ಪೂಜಾರಿ, ಪ್ರಧಾನ ಅರ್ಚಕರಾದ ಗೋಪಾಲಕೃಷ್ಣ ತೋಲ್ಪಾಡಿ, ಪ್ರಚಾರ ಸಮಿತಿ ಅಧ್ಯಕ್ಷ ಸತೀಶ್ ಶೆಟ್ಟಿ ಹೆನ್ನಾಳ, ಸಮಿತಿಯ ಪದಾಧಿಕಾರಿಗಳಾದ ನವೀನ ಪಡ್ಪು, ವಿಶ್ವನಾಥ್ ಕೆಮ್ಮಟೆ ಮತ್ತಿತರ ಗ್ರಾಮಸ್ಥರು ಉಪಸ್ಥಿತರಿದ್ದರು.

ಬ್ರಹ್ಮಕಲಶೋತ್ಸವದ ಅಧ್ಯಕ್ಷತೆಯನ್ನು ಪುತ್ತೂರಿನ ಶಾಸಕರೂ, ಅದೇ ಊರಿನವರಾದ ಸಂಜೀವ ಮಠ೦ದೂರರು ವಹಿಸಿಕೊಂಡಿದ್ದಾರೆ.

Leave A Reply

Your email address will not be published.