ಜೀರ್ಣೋದ್ಧಾರಗೊಳ್ಳುತ್ತಿರುವ ಕಾಣಿಯೂರು ಶ್ರೀ ಅಮ್ಮನವರ ಕ್ಷೇತ್ರಕ್ಕೆ ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ಸಂಸದೆ ಕುಮಾರಿ ಶೋಭಾ ಕರಂದ್ಲಾಜೆಯವರು ಇಂದು ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಕಾಣಿಯೂರು ಮಠದ ವ್ಯವಸ್ಥಾಪಕರಾದ ನಿರಂಜನ್ ಆಚಾರ್ ಅವರು ಜೀರ್ಣೋದ್ಧಾರದ ಕಾರ್ಯಚಟುವಟಿಕೆಗಳ ಕುರಿತು ಮಾಹಿತಿ ನೀಡಿದರು.
ಶೋಭಕ್ಕ ಪ್ರತಿ ವರ್ಷ ತನ್ನ ಹುಟ್ಟ್ಟೂರಾದ ಚಾರ್ವಾಕದ ಶ್ರೀ ಕಪಿಲೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಬರುತ್ತಾರೆ. ಅಲ್ಲದೆ, ಪ್ರತಿ ಬಾರಿ ಚುನಾವಣೆಗೆ ಸ್ಪರ್ಧಿಸುವಾಗಲೂ ಊರಿನ ದೇವಸ್ಥಾನಗಳಿಗೆ ಭೇಟಿ ನೀಡುವ ಪರಿಪಾಠ ಇಟ್ಟುಕೊಂಡಿದ್ದಾರೆ. ಅವರು ವಿಶೇಷವಾಗಿ, ತನ್ನ ಹುಟ್ಟೂರಿನ ಬಗ್ಗೆ ವಿಶೇಷ ಪ್ರೀತಿ ಇಟ್ಟುಕೊಂಡಿದ್ದಾರೆ.