ಪುಣ್ಚಪ್ಪಾಡಿ ಜೋಡುಕಾವಲು ಕಾಂಕ್ರೀಟ್ ರಸ್ತೆ ಉದ್ಘಾಟನೆ

ಪುಣ್ಚಪ್ಪಾಡಿ ಜೋಡುಕಾವಲು ಕಾಂಕ್ರೀಟ್ ರಸ್ತೆ ಉದ್ಘಾಟನೆ

ಸವಣೂರು :ಸವಣೂರು ಗ್ರಾ.ಪಂ.ವ್ಯಾಪ್ತಿಯ ಪುಣ್ಚಪ್ಪಾಡಿ ಗ್ರಾಮದ ಜೋಡುಕಾವಲು ಕಾಂಕ್ರೀಟ್ ರಸ್ತೆಯ ಉದ್ಘಾಟನಾ ಕಾರ್ಯಕ್ರಮನಡೆಯಿತು. ಸವಣೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಇಂದಿರಾ ಬಿ.ಕೆ ಅವರು ಉದ್ಘಾಟಿಸಿದರು. ತಾಲೂಕು ಪಂಚಾಯತ್ ಉಪಾಧ್ಯಕ್ಷೆ ಲಲಿತಾ ಈಶ್ವರ್, ತಾಲೂಕು ಪಂಚಾಯತ್ ಸದಸ್ಯೆ ಕು. ರಾಜೇಶ್ವರಿ ಕೆ, ಪುತ್ತೂರು ಎ.ಪಿ.ಎಂ.ಸಿ. ಅಧ್ಯಕ್ಷ ದಿನೇಶ್ ಮೆದು, ಸವಣೂರು ಸಿ.ಎ. ಬ್ಯಾಂಕ್ ಅಧ್ಯಕ್ಷ ಗಣೇಶ್ ನಿಡ್ವಣ್ಣಾಯ, ಗ್ರಾ.ಪಂ.ಮಾಜಿ ಸದಸ್ಯ ನಾಗರಾಜ ನಿಡ್ವಣ್ಣಾಯ,ಮಾಜಿ ಉಪಾಧ್ಯಕ್ಷ ರಾಕೇಶ್ ರೈ ಕೆಡೆಂಜಿ,ಪ್ರಮುಖರಾದ ಲೋಕೇಶ್ ಕನ್ಯಾಮಂಗಲ,ಬಾಬು ದೇವಸ್ಯ,ಪ್ರಜ್ವಲ್ ಕೆ.ಆರ್,ಗ್ರಾ.ಪಂ.ಸಿಬಂದಿ ಪ್ರಮೋದ್ ಕುಮಾರ್ ಬಿ,ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಕರುಣಾಕರ ಸಾರಕರೆ ಮೊದಲಾದವರಿದ್ದರು.

ಗ್ರಾ.ಪಂ.ಸದಸ್ಯ ಗಿರಿಶಂಕರ ಸುಲಾಯ ಸ್ವಾಗತಿಸಿ,ವಂದಿಸಿದರು.

Leave A Reply

Your email address will not be published.