ಪುತ್ತೂರು ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ | ಪುಲ್ವಾಮದಲ್ಲಿ ಮಡಿದ ಯೋಧರಿಗೆ ಗೌರವ ಸಮರ್ಪಣೆ

ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ, ಪುತ್ತೂರು ಇವರು ಇಂದು ವಿಶ್ವ ಹಿಂದೂ ಪರಿಷತ್ ನ ಪುತ್ತೂರು ಕಾರ್ಯಾಲಯದಲ್ಲಿ ನಡೆದ ಸರಳ ಸಮಾರಂಭದಲ್ಲಿ ಪುಲ್ವಾಮ ದಾಳಿಯಲ್ಲಿ ಹುತಾತ್ಮರಾದ 40 ಯೋಧರಿಗೆ ಗೌರವ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಹಿಂದೂ ಪರಿಷತ್ ಪುತ್ತೂರು ಪ್ರಖಂಡದ ಅಧ್ಯಕ್ಷರಾಗಿರುವ ಜನಾರ್ಧನ್ ಬೆಟ್ಟ ಅವರು ನುಡಿ ನಮನ ಅರ್ಪಿಸಿದರು.

ಸಮಾರಂಭದಲ್ಲಿ ವಿಶ್ವ ಹಿಂದೂ ಪರಿಷತ್, ಪುತ್ತೂರು ಪ್ರಖಂಡದ ಜಿಲ್ಲಾ ಕಾರ್ಯದರ್ಶಿ ಸತೀಶ್ ಬಿ ಎಸ್ ಅವರು ಉಪಸ್ಥಿತರಿದ್ದರು.

ಭಾರತ ಮಾತೆಗೆ ಪುಷ್ಪಾರ್ಚನೆ ಮಾಡುವ ಮೂಲಕ ಹುತಾತ್ಮ ಯೋಧರಿಗೆ ಗೌರವ ಸಲ್ಲಿಸಲಾಯಿತು.

ಭಜರಂಗದಳ ಪ್ರಖಂಡ ಸಾಪ್ತಾಹಿಕ ಮಿಲನ್ ಪ್ರಮುಖ್ ವಿಶಾಖ್ ಸಸಿಹಿತ್ಲು ಕಾರ್ಯಕ್ರಮ ನಿರ್ವಹಿಸಿದರು.

ಬಜರಂಗದಳ ಜಿಲ್ಲಾ ಸಂಚಾಲಕ ಶ್ರೀಧರ ತೆಂಕಿಲ, ಪ್ರಖಂಡ ಸಂಚಾಲಕ ಹರೀಶ್ ದೋಳ್ಪಾಡಿ, ಸಹ ಸಂಚಾಲಕ ಜಯಂತ ಕುಂಜೂರು ಪಂಜ, ರೂಪೇಶ್ ಮುರ, ಪ್ರವೀಣ್ ಮುರ, ಮುಂತಾದವರು ಉಪಸ್ಥಿತರಿದ್ದರರು.

Leave A Reply

Your email address will not be published.