KSRTC ಬಸ್‌ಗೆ ಕಂಟೇನರ್ ಲಾರಿ ಡಿಕ್ಕಿ: 19 ಮಂದಿ ಸ್ಥಳದಲ್ಲೇ ಸಾವು

ತಮಿಳುನಾಡು: ತಿರ್ಪೂರು ಜಿಲ್ಲೆಯ ಅವಿನಾಶಿ ನಗರದ ಬಳಿ ಫೆ.20ರಂದು ಬೆಳಗ್ಗೆ 4.30ಕ್ಕೆ ಕೇರಳ ಸರಕಾರಿ ಬಸ್ ಮತ್ತು ಕಂಟೆನರ್ ಲಾರಿಯ ನಡುವೆ ನಡೆದ ರಣ ಭೀಕರ ಅಪಘಾತದಲ್ಲಿ 20 ಮಂದಿ ಸಾವನ್ನಪ್ಪಿದ್ದಾರೆ.

ಅಪಘಾತದಲ್ಲಿ ಸತ್ತ ಜನರೆಲ್ಲರೂ ಅಕ್ಷರಸ: ಅಪ್ಪಚ್ಚಿಯಾಗಿ ಘಟನೆಯ ಭೀಕರತೆಯನ್ನು ಇನ್ನಷ್ಟು ಹೆಚ್ಚಿಸಿದೆ. ಅಪಘಾತದ ತೀವ್ರತೆಗೆ ವೋಲ್ವೋ ಬಸ್ಸು ಜಜ್ಜಿ ಹಾಕಿದ ಸ್ಕ್ರಾಪ್ ನಂತೆ ಆಗಿದೆ.

ಬೆಂಗಳೂರಿನಿಂದ ಕೇರಳದ ಎರ್ನಾಕುಳಂಗೆ ತೆರಳುತ್ತಿದ್ದ ಕೇರಳ ರಾಜ್ಯ ಸರ್ಕಾರಿ ಬಸ್‌ಗೆ ಕಂಟೇನರ್ ಲಾರಿ ಡಿಕ್ಕಿ ಹೊಡೆದಿದೆ.

ಬಸ್ಸಿನಲ್ಲಿದ್ದ ಪ್ರಯಾಣಿಕರ ಪೈಕಿ 19 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮುಂದುಗಡೆಯಿಂದ ಬರುತ್ತಿದ್ದ ಲಾರಿಯ ಟೈಯರ್ ಸ್ಫೋಟಗೊಂಡ ಕಾರಣದಿಂದಾಗಿ ಚಾಲಕನ ನಿಯಂತ್ರಣ ತಪ್ಪಿ ವೋಲ್ವೊ ಬಸ್‌ಗೆ ಡಿಕ್ಕಿ ಹೊಡೆದಿದ್ದು, ಮುಂಜಾನೆ 4.30ರ ಸುಮಾರಿಗೆ ಈ ಘಟನೆ ನಡೆದಿದೆ. ಬಸ್ ನಲ್ಲಿ 48 ಮಂದಿ ಪ್ರಯಾಣಿಕರಿದ್ದರು. ಅಪಘಾತದ ಕುರಿತಾಗಿ ಯಾವುದೇ ಮಾಹಿತಿಗಾಗಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರ ಸ್ನೇಹಿತರು ಮತ್ತು ಸಂಬಂಧಿಕರಿಗಾಗಿ ಸಹಾಯವಾಣಿಯನ್ನು ತೆರೆಯಲಾಗಿದ್ದು, (0) 7708331194 ಸಂಖ್ಯೆಗೆ ಕರೆ ಮಾಡಬಹುದು ಎಂದು ಜಿಲ್ಲಾಧಿಕಾರಿ ಕೆ. ವಿಜಯ್ ತಿಳಿಸಿದ್ದಾರೆ.

Leave A Reply

Your email address will not be published.