ನರಿಮೊಗರು |ಮೃತ್ಯುಂಜಯೇಶ್ವರ ದೇವಸ್ಥಾನಕ್ಕೆ ಶೋಭಾ ಕರಂದ್ಲಾಜೆ ಬೇಟಿ |ಕ್ಷೇತ್ರದ ಪುಷ್ಕರಣಿ ಅಭಿವೃದ್ದಿಗೆ ಅನುದಾನಕ್ಕೆ ಪ್ರಯತ್ನ-ಶೋಭಾ
ನರಿಮೊಗರು : ಪುತ್ತೂರು ತಾಲೂಕಿನ ಮುಂಡೂರು ಗ್ರಾಮದಲ್ಲಿರುವ ನರಿಮೊಗರು ಶ್ರೀ ಮೃತ್ಯುಂಜಯೇಶ್ವರ ದೇವಾಲಯಕ್ಕೆ ಸಂಸದೆ ಶೋಭಾ ಕರಂದ್ಲಾಜೆ ಬೇಟಿ ನೀಡಿ ದೇವರ ದರ್ಶನ ಪಡೆದರು. ಬಳಿಕ ಕ್ಷೇತ್ರದ ಪುಷ್ಕರಣಿಯನ್ನು ವೀಕ್ಷಿಸಿದರು.ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಬಿ.ಟಿ.ಮಹೇಶ್ಚಂದ್ರ ಸಾಲ್ಯಾನ್ ಅವರು ಪ್ರಾಚೀನ ಪುಷ್ಕರಿಣಿಯ ಅಭಿವೃದ್ದಿ ನಿಟ್ಟಿನಲ್ಲಿ ಈಗಾಗಲೇ ಭಕ್ತಾ„ಗಳ ಸಭೆ ನಡೆಸಲಾಗಿದ್ದು, ಅಭಿವೃದ್ದಿ ಕುರಿತು ಸಮಾಲೋಚನೆ ನಡೆಸಲಾಗಿದೆ ಎಂದು ಮಾಹಿತಿ ನೀಡಿದರು. ಶೋಭಾ ಕರಂದ್ಲಾಜೆ ಅವರು ಮಾತನಾಡಿ,ಪುಷ್ಕರಣಿ ಅಭಿವೃದ್ದಿಗೆ ಸರಕಾರದ ಮೂಲಕ ಅನುದಾನ ಮಂಜೂರು ಮಾಡಲು ಪ್ರಯತ್ನಿಸಲಾಗುವುದು.ಸುಮಾರು 1 …