ಸವಣೂರು ವಿದ್ಯಾರಶ್ಮಿ ಕಾಲೇಜಿನಲ್ಲಿ ಕ್ಯಾಂಪಸ್ ಆಯ್ಕೆ ಮಾಹಿತಿ ಕಾರ್ಯಕ್ರಮ

ಸವಣೂರು : ಇಲ್ಲಿನ ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಂತರಿಕ ಭರವಸಾ ಕೋಶದ ವತಿಯಿಂದ ಅಂತಿಮ ಕಲಾ ಮತ್ತು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಕೌಶಲಾಭಿವೃದ್ಧಿ ಮತ್ತು ಉದ್ಯೋಗ ತರಬೇತಿಯ ಬಗ್ಗೆ ಕಾರ್ಯಾಗಾರವನ್ನು ನಡೆಸಲಾಯಿತು.

ಸಂಪನ್ಮೂಲ ವ್ಯಕ್ತಿಯಾಗಿ ಉನ್ನತಿ ಕೇರಿಯರ್ ಅಕಾಡೆಮಿಯ ಸಂಯೋಜಕಿ ಸುಚೇತಾ ಅವರು ಕಾರ್ಯಕ್ರಮವನ್ನು ನಡೆಸಿಕೊಟ್ಟರು. ವೇದಿಕೆಯಲ್ಲಿ  ಕಾಲೇಜಿನ ಪ್ರಾಂಶುಪಾಲೆ ರಾಜಲಕ್ಷ್ಮಿ ಎಸ್ ರೈ , ಆಂತರಿಕ ಭರವಸಾ ಕೋಶದ ಸಂಯೋಜಕಎಂ. ಶೇಷಗಿರಿ ಮೂಕಮಲೆ,ಉಪನ್ಯಾಸಕರಾದ  ಗುರುರಾಜ್, ಕಿರಣ್ ಚಂದ್ರಉಪಸ್ಥಿತರಿದ್ದರು.

ವಿದ್ಯಾರ್ಥಿನಿ ರಫೀನಾ ಅವರು ಸ್ವಾಗತಿಸಿ, ವಂದಿಸಿದರು.

Leave A Reply

Your email address will not be published.