ಉಪ್ಪಿನಂಗಡಿ -ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ದ್ವಿಚಕ್ರ ವಾಹನಗಳ ಡಿಕ್ಕಿ | ಇಬ್ಬರಿಗೆ ಗಾಯ

ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಗೋಳಿತ್ತಢಿ ಎಂಬಲ್ಲಿ ಫೆ.28 ರ ರಾತ್ರಿ ಬುಲೆಟ್ ಮತ್ತು ಆಕ್ಟಿವಾ ನಡುವೆ ಮುಖಾಮುಖಿ ಸಂಭವಿಸಿ ಸವಾರರಿಬ್ಬರು ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ.

ಗಾಯಾಳುಗಳನ್ನು 108 ಆಂಬುಲೆನ್ಸ್ ನಲ್ಲಿ ಪುತ್ತೂರು ಆಸ್ಪತ್ರೆಗೆ ಕರೆದೊಯ್ದಿದ್ದು ಸ್ಥಳಕ್ಕೆ ಕಡಬ ಪೊಲೀಸ್ ರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ವೇಳೆ ಹಿರೇಬಂಡಾಡಿಯ ಉಳತ್ತೋಡಿ ಬ್ರಹ್ಮಕಲಶೋತ್ಸವದ ಧಾರ್ಮಿಕ ಸಭೆಗೆ ಹಾಜರಾಗಿ ವಾಪಸಾಗುತ್ತಿದ್ದ ಸುಳ್ಯ ಶಾಸಕ ಎಸ್ ಅಂಗಾರ ತಮ್ಮ ಕಾರ್ ನಿಲ್ಲಿಸಿ ಪೊಲೀಸರು ಹಾಗೂ ಸಾರ್ವಜನಿಕರಲ್ಲಿ ಮಾಹಿತಿ ಪಡೆದುಕೊಂಡರು.

ಸದ್ಯ ಗಾಯಾಳುಗಳನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಗಾಯಾಳುಗಳ ವಿವರ ಇನ್ನಷ್ಟೆ ತಿಳಿಯಬೇಕಿದೆ.

Leave A Reply

Your email address will not be published.