ಪಡಿತರ ಚೀಟಿದಾರರಿಗೆ ಇನ್ಮುಂದೆ ಸಿಗಲಿದೆ ತೊಗರಿಬೇಳೆ, ಸಕ್ಕರೆ, ಗೋಧಿ

Share the Article

ಅನ್ನಭಾಗ್ಯ ಯೋಜನೆಯಡಿ ಪಡಿತರ ಚೀಟಿದಾರರಿಗೆ ಅಕ್ಕಿ ಜೊತೆಗೆ ಸಕ್ಕರೆ, ಉಪ್ಪು, ಗೋಧಿ ವಿತರಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದ್ದು ಏಪ್ರಿಲ್ 1ರಿಂದ ಪರಿಷ್ಕೃತ ಯೋಜನೆ ಜಾರಿಗೆ ಬರುವ ಸಾಧ್ಯತೆ ಇದೆ. ಅನ್ನಭಾಗ್ಯ ಯೋಜನೆಯಡಿ 7 ಕೆಜಿ ಅಕ್ಕಿ ಉಚಿತವಾಗಿ ನೀಡುತ್ತಿದ್ದು ಅದನ್ನು ಒಂದು ಕೆಜಿಗೆ ಕಡಿತಗೊಳಿಸಿ ಒಂದು ಕೆಜಿ ತೊಗರಿಬೇಳೆ, ಒಂದು ಕೆಜಿ ಸಕ್ಕರೆ, 1 ಕೆಜಿ ಉಪ್ಪು, ಒಂದು ಲೀಟರ್ ಎಣ್ಣೆ ರಿಯಾಯಿತಿ ದರದಲ್ಲಿ ನೀಡಲು ಯೋಜನೆ ಸಿದ್ಧಪಡಿಸಲಾಗಿದೆ .

ಅನ್ನಭಾಗ್ಯ ಯೋಜನೆಯಡಿ ವಿತರಿಸಲಾಗುವ ಶೇಕಡ 20 ಕ್ಕೂ ಹೆಚ್ಚಿನ ಪ್ರಮಾಣದ ಅಕ್ಕಿ ದುರುಪಯೋಗವಾಗುತ್ತಿದೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಅಕ್ಕಿ ಪ್ರಮಾಣ ಕಡಿತಗೊಳಿಸಿ ರಿಯಾಯಿತಿ ದರದಲ್ಲಿ ತೊಗರಿ ಬೇಳೆ, ಎಣ್ಣೆ, ಸಕ್ಕರೆ ನೀಡಲು ಯೋಜಿಸಲಾಗಿದೆ ಎಂಬ ಮಾಹಿತಿ ದೊರಕಿದೆ.

Leave A Reply

Your email address will not be published.