ಆಲಂಕಾರು ಸಿಎ ಬ್ಯಾಂಕ್ | ಅಧ್ಯಕ್ಷರಾಗಿ ಧರ್ಮಪಾಲ ರಾವ್ ಕಜೆ, ಉಪಾಧ್ಯಕ್ಷರಾಗಿ ಪ್ರದೀಪ್ ರೈ ಮನವಳಿಕೆ

ಕಡಬ: ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಧರ್ಮಪಾಲ ರಾವ್ ಕಜೆ ಮತ್ತು ಉಪಾಧ್ಯಕ್ಷರಾಗಿ ಪ್ರದೀಪ್ ರೈ ಮನವಳಿಕೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸಂಘಕ್ಕೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ 12 ಸ್ಥಾನಗಳನ್ನು ಸಹಕಾರ ಭಾರತಿ ಗೆದ್ದುಕೊಂಡು ಮತ್ತೊಮ್ಮೆ ಅಧಿಕಾರದ ಚುಕ್ಕಾಣಿ ಹಿಡಿದಿತ್ತು.

ಶುಕ್ರವಾರ ನಡೆದ ಅಧ್ಯಕ್ಷ ಆಯ್ಕೆ ಪ್ರಕ್ರಿಯೆಯಲ್ಲಿ ಅವಿರೋಧವಾಗಿ ಆಯ್ಕೆ ನಡೆಯಿತು. ಬಂಟ್ವಾಳ ಸಹಕಾರ ಸಂಘದ ಅಭಿವೃದ್ದಿ ಅಧಿಕಾರಿ ಕೆ. ತ್ರಿವೇಣಿ ರಾವ್ ಚುನಾವಣಾಧಿಕಾರಿದ್ದರು. ಡಿಸಿಸಿ ಬ್ಯಾಂಕ್ ಮೇಲ್ವಿಚಾರಕ ಶರತ್ , ಎಲ್ಲಾ ನಿರ್ದೆಶಕರು ಉಪಸ್ಥಿತರಿದ್ದರು.

Leave A Reply

Your email address will not be published.