ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆತಿಥ್ಯದಲ್ಲಿ ನಡೆಯುತ್ತಿರುವ ಪತ್ರಕರ್ತರ 35 ನೇ ರಾಜ್ಯ ಸಮ್ಮೇಳನದ ಉದ್ಘಾಟನೆ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆತಿಥ್ಯದಲ್ಲಿ ನಡೆಯುತ್ತಿರುವ ಪತ್ರಕರ್ತರ 35 ನೇ ರಾಜ್ಯ ಸಮ್ಮೇಳನದ ಉದ್ಘಾಟನೆಯು ಇಂದು ನಡೆಯಿತು.

ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ದಿ. ವಡ್ಡರ್ಸೆ ರಘರಾಮ ಶೆಟ್ಟಿ ವೇದಿಕೆಯಲ್ಲಿ ಆಯೋಜನೆಗೊಂಡಿರುವ ಎರಡು ದಿನಗಳ ಸಮ್ಮೇಳನದ ಉದ್ಘಾಟನೆಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಸಾನ್ನಿಧ್ಯದಲ್ಲಿ ನೆರವೇರಿತು.

ಪತ್ರಕರ್ತರು ರಾಜಕೀಯ ಸುದ್ದಿಗಳಿಗೆ ಹೆಚ್ಚಿನ ಅದ್ಯತೆ ನೀಡಬಾರದು, ಅದರಿಂದ ಜನಸಾಮಾನ್ಯರಿಗೆ ಹೆಚ್ಚೇನೂ ಉಪಯೋಗವಾಗುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಾ.ಅಶ್ವತ್ಥ ನಾರಾಯಣ ಹೇಳಿದ್ದಾರೆ. ಜಾಗತೀಕರಣದಿಂದ ಹಣಕ್ಕೆ ಹೆಚ್ಚಿನ ಮಹತ್ವ ಸಿಗುತ್ತಿದೆ. ಇಂತಹ ಸನ್ನಿವೇಶದಲ್ಲಿ ಪತ್ರಕರ್ತರು ವೃತ್ತಿಪರ ಮೌಲ್ಯವನ್ನು ಕಾಪಾಡಿಕೊಂಡು ವಿಶ್ವಾರ್ಹತೆಯೊಂದಿಗೆ ಕಾರ್ಯ ನಿರ್ವಹಿಸುವುದು ನಿಜಕ್ಕೂ ಸವಾಲಿನ ಕಾರ್ಯ ಎಂದವರು ಹೇಳಿದರು.

ಸ್ಮರಣ ಸಂಚಿಕೆಯನ್ನು ತರಂಗ ವಾರಪತ್ರಿಕೆಯ ಸಂಪಾದಕಿ ಸಂಧ್ಯಾ ಪೈ ಅವರು ಬಿಡುಗಡೆ ಮಾಡಿ ಇಂದು ಮತ್ತು ನಾಳೆ- ಎರಡು ದಿನ ನಡೆಯಲಿರುವ ಸಮ್ಮೇಳನದ ಆಶಯ ಭಾಷಣ ಮಾಡಿದರು.

ವ್ಯಂಗ್ಯ ಚಿತ್ರ ಪ್ರದರ್ಶನವನ್ನು ಉಪಮುಖ್ಯಮಂತ್ರಿ ಸಿ.ಎನ್. ಅಶ್ವತ್ಥ ನಾರಾಯಣ ಉದ್ಘಾಟಿಸಿದರೆ, ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಪೋಟೊ ಪ್ರದರ್ಶನ ಮತ್ತು ವಸ್ತುಪ್ರದರ್ಶನವನ್ನು ಉದ್ಘಾಟಿಸಿದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಅಧ್ಯಕ್ಷತೆ ವಹಿಸಿದ್ದರು. ಜಿಲ್ಲೆಯ ಶಾಸಕರುಗಳಾದ ಡಿ.ವೇದವ್ಯಾಸ ಕಾಮತ್, ಡಾ.ವೈ.ಭರತ್ ಶೆಟ್ಟಿ, ಯು.ಟಿ.ಖಾದರ್, ವಿಧಾನಪರಿಷತ್ ಸದಸ್ಯ ಕೆ.ಹರೀಶ್ ಕುಮಾರ್, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ ಎಂ.ಎನ್.ರಾಜೇಂದ್ರ ಕುಮಾರ್, ಅದಾನಿ ಗ್ರೂಪ್‌ನ ಮುಖ್ಯಸ್ಥ ಕಿಶೋರ್ ಆಳ್ವ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ಅಧ್ಯಕ್ಷ ಬಿ.ವಿ.ಮಲ್ಲಿಕಾರ್ಜುನಯ್ಯ, ಏಷ್ಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ಸಂಚಾಲಕ ಎಚ್.ಬಿ.ಮದನಗೌಡ, ಮಂಗಳೂರು ಮಹಾನಗರ ಪಾಲಿಕೆ ಮೇಯರ್ ದಿವಾಕರ ಪಾಂಡೇಶ್ವರ, ಉಪಮೇಯರ್ ವೇದಾವತಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ್, ದ.ಕ.ಜಿಲ್ಲಾಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ, ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್, ಪ್ರೆಸ್ ಕ್ಲಬ್ ಅಧ್ಯಕ್ಷ ಅನ್ನು ಮಂಗಳೂರು, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಆನಂದ ಶೆಟ್ಟಿ, ಸಮ್ಮೇಳನ ಸಂಚಾಲಕ ಬಾಳ ಜಗನ್ನಾಥ ಶೆಟ್ಟಿ ಮತ್ತಿತರ ಗಣ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿಯಾದ ಜಿ.ಸಿ.ಲೋಕೇಶ್ ವಂದಿಸಿದರು. ಹಿರಿಯ ಪತ್ರಕರ್ತರಾದ ಮನೋಹರ ಪ್ರಸಾದ್ ಮತ್ತು ರವೀಂದ್ರ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Leave A Reply

Your email address will not be published.