ಪತ್ರಕರ್ತ ದಯಾನಂದ ಕುಡುಪು ನಿಧನ


ಮಂಗಳೂರು, ಮಾ. 9: ಪತ್ರಕರ್ತ ಮತ್ತು ಸ್ಯಾಕ್ಸೋಫೋನ್ ವಾದಕ ದಯಾನಂದ ಕುಡುಪು (55) ಸೋಮವಾರ ಸಂಜೆ ತನ್ನ ಸ್ವಗೃಹದಲ್ಲಿ ನಿಧನರಾದರು.

‘ವಾರ್ತಾಭಾರತಿ’ ದಿನಪತ್ರಿಕೆಯಲ್ಲಿ ಉಪಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದ ಅವರು ಈ ಹಿಂದೆ ಹೊಸದಿಗಂತ, ವಿಜಯಕರ್ನಾಟಕ ಮುಂತಾದ ಪತ್ರಿಕೆಗಳಲ್ಲಿ ಅವರು ಸೇವೆ ಸಲ್ಲಿಸಿದ್ದರು.

ಅವರು ವಾರದ ಹಿಂದೆ ಅಸ್ವಸ್ಥರಾಗಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಪತ್ರಿಕೋದ್ಯಮದ ಜತೆಗೆ ಉತ್ತಮ ಸ್ಯಾಕ್ಸೋಫೋನ್ ವಾದಕರಾಗಿದ್ದ ಅವರು ದ.ಕ.ಜಿಲ್ಲಾ ಪತ್ರಕರ್ತರ ಸಮ್ಮೇಳನ, ಜಿಲ್ಲೆ ಹಾಗೂ ರಾಜ್ಯಮಟ್ಟದ ಹಲವು ಕಾರ್ಯಕ್ರಮಗಳಲ್ಲಿ ತನ್ನ ಸ್ಯಾಕ್ಸೋಫೋನ್ ನ ಸ್ವರ ಮಾಧುರ್ಯವನ್ನು ಪ್ರದರ್ಶಿಸಿದ್ದರು.

ಮೃತರು ಪತ್ನಿ, ಇಬ್ಬರು ಪುತ್ರಿಯರು ಮತ್ತು ಅಪಾರ ಬಂಧುಬಳಗವನ್ನು ಅಗಲಿದ್ದಾರೆ.

Leave A Reply

Your email address will not be published.