ಹಿರಿಯ ಸಹಕಾರಿ ಧುರೀಣ ಯು. ಭಾಸ್ಕರ ಆಚಾರ್ಯ ಇನ್ನಿಲ್ಲ

ಸಂಘ ಪರಿವಾರದ ಹಿರಿಯ ಕಾರ್ಯಕರ್ತ, ಯು.
ಭಾಸ್ಕರ ಆಚಾರ್ಯ ಅವರು ಇಂದು ನಸುಕಿನ ಜಾವ ನಿಧನರಾದರು. ಅವರಿಗೆ 61 ವರ್ಷ ವಯಸ್ಸಾಗಿತ್ತು.

ಆರೋಗ್ಯದಲ್ಲಿ ತೀವ್ರ ಸಮಸ್ಯೆ ಉಂಟಾದ ಪರಿಣಾಮ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ.

ಅವರು ಸಂಘಪರಿವಾರದ ಸಕ್ರಿಯ ಕಾರ್ಯಕರ್ತರಾಗಿದ್ದರು. ನೆಕ್ಕಿಲಾಡಿ ಬಿಜೆಪಿಯ ಪ್ರಮುಖರಾಗಿದ್ದರು. ಉಪ್ಪಿನಂಗಡಿ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ನ ಅಧ್ಯಕ್ಷರಾಗಿ ಮತ್ತು ಮೂರು ಸಲ ಅದರ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು.

ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದ ಅವರು ಮನೆಯಲ್ಲೇ ಚಿಕಿತ್ಸೆ ಮುಂದುವರೆಸಿದ್ದರು. ನಿನ್ನೆ ಪರಿಸ್ಥಿತಿ ಬಿಗಡಾಯಿಸಿದೆ. ಪರಿಣಾಮ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು.

Leave A Reply

Your email address will not be published.