ಮಂಗಳೂರಿನಲ್ಲಿ ಅಪಘಾತ | ಬಡಗನ್ನೂರಿನ ಯುವಕ ಮೃತ್ಯು

Share the Article

ಪುತ್ತೂರು : ಮಂಗಳೂರಿನಲ್ಲಿ ನಡೆದ ಅಪಘಾತದಲ್ಲಿ ಮೂಡಬಿದಿರೆಯ ಇಂಜಿನಿಯರಿಂಗ್ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿಯೋರ್ವ ಮೃತಪಟ್ಟಿದ್ದಾನೆ. ಮೃತ ವಿದ್ಯಾರ್ಥಿಯನ್ನು ಪುತ್ತೂರು ತಾಲೂಕಿನ ಬಡಗನ್ನೂರು ಪೇರಾಲ್ ನಿವಾಸಿ ಚಂದ್ರಶೇಖರ್ ಆಳ್ವರ ಪುತ್ರ ಪ್ರಣ್ವಿತ್ ಆಳ್ವ (21) ಎಂದು ಗುರುತಿಸಲಾಗಿದೆ.

ಪ್ರಣ್ವಿತ್ ಸಂಚರಿಸುತ್ತಿದ್ದ ಬೈಕ್ ಮಂಗಳೂರಿನ ಮರೋಳಿ ಎಂಬಲ್ಲಿ ಲಾರಿಗೆ ಡಿಕ್ಕಿ ಹೊಡೆದ ಕಾರಣ ಅಪಘಾತ ಸಂಭವಿಸಿದೆ.

ಪ್ರಣ್ವಿತ್ ಮೂಡುಬಿದರೆಯ MIT ಕಾಲೇಜಿನಲ್ಲಿ ಸಿವಿಲ್ ಇಂಜಿನಿಯರಿಂಗ್ ವಿದ್ಯಾಭ್ಯಾಸ ಮಾಡುತಿದ್ದರು.

Leave A Reply

Your email address will not be published.