ಸರ್ವೆ ಶ್ರೀ ಸುಬ್ರಾಯ ದೇವಸ್ಥಾನಕ್ಕೆ 10 ಲಕ್ಷ ಅನುದಾನ | ದೇವಸ್ಥಾನದ ವತಿಯಿಂದ ಶಾಸಕ ಸಂಜೀವ ಮಠಂದೂರು ಅವರಿಗೆ ಕೃತಜ್ಞತೆ

ಪುತ್ತೂರು: ಸರ್ವೆ ಶ್ರೀ ಸುಬ್ರಾಯ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ಸರಕಾರದಿಂದ ರೂ.10 ಲಕ್ಷ ಅನುದಾನವನ್ನು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಪುತ್ತೂರಿನ ವಿಧಾನಸಭಾ ಕ್ಷೇತ್ರದ ಶಾಸಕರಾದ ಮಾನ್ಯ ಸಂಜೀವ ಮಠಂದೂರು ಅವರು ಬಿಡುಗಡೆ ಮಾಡಿದ್ದಾರೆ.

ಇದಕ್ಕಾಗಿ ಶಾಸಕ ಸಂಜೀವ ಮಠಂದೂರು ಅವರ ಸ್ವಗೃಹದಲ್ಲಿ ಭೇಟಿಯಾಗಿ ದೇವಸ್ಥಾನಕ್ಕೆ ಮಂಜೂರು ಮಾಡಿಸಿರುವ ಸಲುವಾಗಿ ದೇವಸ್ಥಾನದ ವತಿಯಿಂದ ಅಭಿನಂದಿಸಲಾಯಿತು.

ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪ್ರಸಾದ್ ರೈ ಸೊರಕೆ, ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷ ಲೋಕಪ್ಪಗೌಡ ಕರೆಮನೆ ,ಅಧ್ಯಕ್ಷ ಶಿವನಾಥ ರೈ ಮೇಗಿನ ಗುತ್ತು ,ಆನಂದ ಭಂಡಾರಿ ಸೊರಕೆ, ಬೆಳಿಯಪ್ಪ ಗೌಡ ಸರ್ವೆ ಗೌತಮ ರೈ ಸರ್ವೆ ಉಪಸ್ಥಿತರಿದ್ದರು.

Leave A Reply

Your email address will not be published.