ಕೊರೋನಾ ಭೀತಿ : ನಾಳೆ ನಡೆಯಬೇಕಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಮುಂದೂಡಿಕೆ

ರಾಜ್ಯಾದ್ಯಂತ ಕೊರೋನಾ ವೈರಸ್​ ಭೀತಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದರಿಂದ ಮಾ. 27 ರಂದು ನಡೆಯಬೇಕಿದ್ದ ಎಸ್​ಎಸ್​ಎಲ್​ಸಿ ಪರೀಕ್ಷೆ ಸೇರಿದಂತೆ ಎಲ್ಲ ಪರೀಕ್ಷೆಗಳನ್ನು ಮುಂದೂಡಲಾಗಿತ್ತು. ಇಂದು ಬೆಳಗ್ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಈ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡಿದ್ದರು.

ಅದರ ಬಳಿಕ 9 ಜಿಲ್ಲೆಗಳಲ್ಲಿ ಲಾಕ್‌ಡೌನ್ ಘೋಷಣೆ ಮಾಡಿದರಿಂದ ನಾಳೆ ನಡೆಯಬೇಕಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುವುದು ಅನುಮಾನಕ್ಕೆ ಎಡೆಮಾಡಿಕೊಟ್ಟಿತ್ತು .

ಬೆಳಿಗ್ಗೆ ತಾನೇ ಸಿ ಎಂ ಯಡಿಯೂರಪ್ಪನವರು SSLC ಪರೀಕ್ಷೆ ಮುಂದುವರೆಯುತ್ತದೆ. ಪಿಯುಸಿ ಪರೀಕ್ಷೆ ಯಥಾಪ್ರಕಾರ ಎಂದಿದ್ದರು. ಸಂಜೆಯ ಹೊತ್ತಿಗೆ ನಿರ್ಧಾರ ಬದಲಾಗಿದೆ. ಇದೀಗ ಸಚಿವ ಸುರೇಶ್ ಕುಮಾರ್ ಅವರು ಅಧಿಕೃತವಾಗಿ ದ್ವಿತೀಯ ಪಿಯುಸಿ ಪರೀಕ್ಷೆ ಮುಂದೂಡಿದ ಬಗ್ಗೆ ಮಾಹಿತಿ ನೀಡಿದರು.

Leave A Reply

Your email address will not be published.