ಕೊರೊನಾ ವಿರುದ್ಧ ಕಾರ್ಯಾಚರಣೆ ಮುಖ್ಯಮಂತ್ರಿ ಪರಿಹಾರ ನಿಧಿಗೆ 3 ತಿಂಗಳ ವೇತನ ನೀಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್

Share the Article

ವಿಜಯಪುರದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ತಮ್ಮ ಶಾಸಕರ ವೇತನದ ಮೂರು ತಿಂಗಳ ಸಂಬಳವನ್ನು ಕೋರೋನಾ ವೈರಸ್ ವಿರುದ್ದದ ಮುಖ್ಯಮಂತ್ರಿ ಪರಿಹಾರ ನಿಧಿಗೆ ಕೊಡುವುದಾಗಿ ಘೋಷಿಸಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪ ನವರಿಗೆ ಈ ಸಂಬಂಧ ವಿಜಯಪುರದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಪತ್ರ ಬರೆದಿದ್ದು ಕೋರೋಣಾ ವಿರುದ್ಧದ ಹೋರಾಟದಲ್ಲಿ ಸರಕಾರಕ್ಕೆ ತುಂಬಾ ನಷ್ಟವಾಗಿದೆ. ಈ ಸಂದರ್ಭದಲ್ಲಿ ನಾವು ನೈತಿಕವಾಗಿ ಸಾಮಾಜಿಕವಾಗಿ, ರಾಜಕೀಯವಾಗಿ ಮತ್ತು ಆರ್ಥಿಕವಾಗಿ ಸಹಾಯಕ್ಕೆ ಸಿದ್ದವಿದ್ದೇವೆ ಎಂದಿದ್ದಾರೆ.

ಅಲ್ಲದೆ ಪ್ರಧಾನಿ ಕೈಗೊಂಡ 21 ದಿನಗಳ ಲಾಕ್ ಡೌನ್ ನ ದಿಟ್ಟ ನಿರ್ಧಾರಕ್ಕೆ ಪೂರ್ತಿ ಬೆಂಬಲವಿದೆ ಎಂದಿದ್ದಾರೆ.

Leave A Reply

Your email address will not be published.