ದ.ಕ | ನಾಳೆಯಿಂದ ಬೆಳಿಗ್ಗೆ 7 ರಿಂದ 12 ಗಂಟೆ ತನಕ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ | ನಂತರ ವಾಹನ ರಸ್ತೆಗಿಳಿದರೆ ಸೀಝ್ !
ಏಪ್ರಿಲ್ 1 : ದ.ಕ. ಜಿಲ್ಲೆ ನಾಳೆ ಎಲ್ಲಾ ದಿನಸಿ ಅಂಗಡಿ, ತರಕಾರಿ, ಫ್ರೂಟ್ ಅಂಗಡಿಗಳು ಬೆಳಿಗ್ಗೆ 7 ರಿಂದ 12 ಗಂಟೆಯವರೆಗೆ ತೆರೆಯಲಿದೆ.
![](https://hosakannada.com/wp-content/uploads/2024/07/First.jpeg)
ಹಾಲು, ಮೆಡಿಕಲ್, ಗ್ಯಾಸ್ ವಿತರಣೆ, ಪೆಟ್ರೋಲ್ ಪಂಪ್, ಬ್ಯಾಂಕ್ ಗಳು ಎಂದಿನಂತೆ ಓಪನ್ ಪೆಟ್ರೋಲ್ ಪಂಪ್ ನಲ್ಲಿ ಖಾಸಗಿ ವಾಹನಗಳಿಗೆ ಬೆಳಿಗ್ಗೆ 7 ರಿಂದ 12 ರವರೆಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.
![](https://hosakannada.com/wp-content/uploads/2024/07/Middle.jpeg)
ಗೂಡ್ಸ್ ವಾಹನಗಳಿಗೆ ಇಡೀ ದಿನ ಸೇವೆಯಲ್ಲಿರಲು ಅವಕಾಶ ಕಲ್ಪಿಸಲಾಗಿದೆ.
ಜಿಲ್ಲಾಧಿಕಾರಿ ಕಛೇರಿಯಲ್ಲಿ ಸಭೆ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ COVID-19 ವೈರಾಣು ಸೋಂಕು ಹರಡದಂತೆ ಮುಂಜಾಗ್ರತೆ ಕ್ರಮ ವಹಿಸಲು ಹಾಗೂ ಅಗತ್ಯ ವಸ್ತುಗಳ ಪೂರೈಕೆ ಮತ್ತು ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಚರ್ಚಿಸುವ ಸಲುವಾಗಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಇಂದು ಸಭೆ ನಡೆಯಿತು.
ಈ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ದಕ್ಷಿಣಕನ್ನಡ ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್, ದಕ್ಷಿಣ ಕನ್ನಡ ಜಿಲ್ಲೆಯ ಮಾನ್ಯ ಜಿಲ್ಲಾಧಿಕಾರಿಗಳಾದ ಸಿಂಧು. ಬಿ ರೂಪೇಶ್, ಶಾಸಕರಾದ ವೇದವ್ಯಾಸ ಕಾಮತ್, ಡಾ.ವೈ ಭರತ್ ಶೆಟ್ಟಿ, ಐವನ್ ಡಿಸೋಜ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.
![](https://hosakannada.com/wp-content/uploads/2020/03/EUcOZB6U4AAjZyq-667x500.jpg)
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯಿಂದ ಬೆಳಿಗ್ಗೆ 7 ರಿಂದ ಮಧ್ಯಾಹ್ನ 12 ಗಂಟೆವರೆಗೆ ದಿನಸಿ ಅಂಗಡಿಗಳನ್ನು ಸಾರ್ವಜನಿಕರ ಉಪಯೋಗಕ್ಕೆ ತೆರೆದಿಡಬೇಕೆಂದು ಇದೇ ಸಂದರ್ಭದಲ್ಲಿ ತೀರ್ಮಾನಿಸಲಾಯಿತು.
![](https://hosakannada.com/wp-content/uploads/2020/03/IMG_20200331_191508-522x500.jpg)
ಎಚ್ಚರಿಕೆ : ಮಧ್ಯಾಹ್ನ 12 ಗಂಟೆಯ ನಂತರ ಸಂಚರಿಸುವ ಖಾಸಗೀ ವಾಹನಗಳನ್ನು ಸೀಝ್ ಮಾಡಿ ದಂಡ ವಸೂಲಿ ಮಾಡುವ ಎಚ್ಚರಿಕೆ ನೀಡಲಾಗಿದೆ.
ಕರ್ನಾಟಕದ ಬುದ್ದಿವಂತ ಸರಕಾರಕ್ಕೆ ಜನಸಾಮಾನ್ಯರಿಂದ ಒಂದು ಪತ್ರ