ಸುಳ್ಯದ ಅಜ್ಜಾವರದ ವಾಸದ ಮನೆಯಲ್ಲಿ ಆಕಸ್ಮಿಕ ಬೆಂಕಿ ಅವಘಡ
ಅಜ್ಜಾವರ ಗ್ರಾಮ ದೊಡ್ಡೇರಿ ಮನೆ ಸರೋಜಿನಿ ಎಂಬವರ ವಾಸದ ಮನೆಗೆ ಏಪ್ರಿಲ್ 7 ರಂದು ರಾತ್ರಿ ಆಕಸ್ಮಿಕ ಬೆಂಕಿ ತಗುಲಿದೆ.
![](https://hosakannada.com/wp-content/uploads/2024/07/First.jpeg)
ಆಕಸ್ಮಿಕ ಬೆಂಕಿಯಿಂದ ಮನೆಯ ಹಿಂಭಾಗ ಭಾಗಶಃ ಬೆಂಕಿಗೆ ಜಖಂ ಗೊಂಡಿರುತ್ತದೆ. ಈ ಸಂದರ್ಭದಲ್ಲಿ ಮನೆಯಲ್ಲಿ ಸರೋಜಿನಿ ಮತ್ತು ಪತಿ ಹಾಗೂ ಇಬ್ಬರು ಮಕ್ಕಳು ಇದ್ದು ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ.
![](https://hosakannada.com/wp-content/uploads/2024/07/Middle.jpeg)
ವಿಷಯ ತಿಳಿದ ಸುಳ್ಯ ತಹಸಿಲ್ದಾರ್ ಅನಂತ ಶಂಕರ್, ಸುಳ್ಯ ತಾಲೂಕು ಕಂದಾಯ ನಿರೀಕ್ಷಕರಾದ ಬಿ ಕೊರಗಪ್ಪ ಹೆಗ್ಡೆ, ಅಜ್ಜಾವರ ಗ್ರಾಮದ ಗ್ರಾಮ ಲೆಕ್ಕಾಧಿಕಾರಿ ಶರತ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿರುತ್ತಾರೆ.
ಈ ಸಂದರ್ಭದಲ್ಲಿ ಪ್ರಾಕೃತಿಕ ವಿಕೋಪದ ಅಡಿಯಲ್ಲಿ ಕಡತಗಳ ಪರಿಶೀಲನೆ ನಡೆಸಿ ಸಹಾಯಧನ ತರಿಸುವಲ್ಲಿ ಕ್ರಮ ಕೈಗೊಳ್ಳುವುದಾಗಿ ಅಧಿಕಾರಿಗಳು ಭರವಸೆಯನ್ನು ನೀಡಿರುತ್ತಾರೆ.
ಇದೇ ಸಂದರ್ಭದಲ್ಲಿ ಕಂದಾಯ ಇಲಾಖೆ ವತಿಯಿಂದ ಸಂತ್ರಸ್ತರಿಗೆ 50 ಕೆಜಿ ಅಕ್ಕಿಯನ್ನು ವಿತರಿಸಲಾಗಿದೆ ಎಂದು ತಿಳಿದುಬಂದಿದೆ.
ವರದಿ – ಹಸೈನಾರ್ ಜಯನಗರ