ಎ.20 ರಿಂದ ಪುತ್ತೂರು ಎಪಿಎಂಸಿಯಲ್ಲಿ ಅಡಿಕೆ ಖರೀದಿ | ವರ್ತಕರ ಸಭೆ
ಪುತ್ತೂರು: ಪುತ್ತೂರು ತಾಲೂಕಿಗೆ ಸೀಮಿತವಾಗಿ ಖಾಸಗಿ ವರ್ತಕರಿಗೂ ಅಡಿಕೆ ಖರೀದಿಗೆ ಅವಕಾಶ ಕೊಡಬೇಕೆಂಬ ಬೇಡಿಕೆಯ ಹಿನ್ನೆಲೆಯಲ್ಲಿ ಮತ್ತು ಈ ರೀತಿ ಅವಕಾಶ ನೀಡಿದಾಗ ಒಂದಷ್ಟು ಸ್ಪರ್ಧಾತ್ಮಕ ದರದಲ್ಲಿ ಅಡಿಕೆ ಖರೀದಿ ನಡೆಯುತ್ತದೆ ಎಂಬ ನಿಟ್ಟಿನಲ್ಲಿ ಎಪಿಎಂಸಿಯ ಪ್ರಾಂಗಣದಲ್ಲಿ ಅಡಿಕೆ ಖರೀದಿ ಮಾಡಲು ಅವಕಾಶ ಕಲ್ಪಿಸಲಾಗಿದೆ.
![](https://hosakannada.com/wp-content/uploads/2024/07/First.jpeg)
ಈ ಕುರಿತಂತೆ ಶುಕ್ರವಾರ ಎಪಿಎಂಸಿ ಪ್ರಾಗಂಣದಲ್ಲಿ ಅಧ್ಯಕ್ಷ ದಿನೇಶ್ ಮೆದು ಅವರ ಅಧ್ಯಕ್ಷತೆಯಲ್ಲಿ ಎಪಿಎಂಸಿ ಯಾರ್ಡ್ ಅಡಿಕೆ ವರ್ತಕರ ಸಭೆ ನಡೆಯಿತು.
![](https://hosakannada.com/wp-content/uploads/2024/07/Middle.jpeg)
ವರ್ತಕರು ಲಾಕ್ಡೌನ್ ಅಂತ್ಯ ಕಾಣುವವರೆಗೂ ನಿರಂತರವಾಗಿ ಅಡಿಕೆ ಖರೀದಿ ಮಾಡಬೇಕು ಎಂಬ ಷರತ್ತನ್ನು ವಿಧಿಸಲಾಗಿದೆ. ಒಂದು ವೇಳೆ ಷರತ್ತು ಉಲ್ಲಂಘನೆ ಆದರೆ ಅವರಿಗೆ ಅವಕಾಶವಿಲ್ಲ. ಈ ಸಂದರ್ಭದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಜವಾಬ್ದಾರಿಯನ್ನು ವರ್ತಕರು ವಹಿಸಿಕೊಳ್ಳಬೇಕು ಎಂಬ ಎಸಿ ಡಾ.ಯತೀಶ್ ಉಳ್ಳಾಲ್ ಅವರ ಸೂಚನೆಯಂತೆ ಎಲ್ಲಾ ವರ್ತಕರು ವ್ಯವಹರಿಸಬೇಕು ಎಂದು ದಿನೇಶ್ ಮೆದು ಹೇಳಿದರು.
ಅಲ್ಲಿಗೆ ತಮ್ಮ ವಾಹನಗಳಲ್ಲಿ ಅಡಿಕೆ ತರಬೇಕು. ಎಪಿಎಂಸಿಯ ದೂರವಾಣಿ ನಂಬರ್ 08251-230434ಗೆ ಕರೆ ಮಾಡಬೇಕು. ಅಥವಾ ಎಪಿಎಂಸಿ ಕಾರ್ಯದರ್ಶಿ ರಾಮಚಂದ್ರ ಅವರ ಮೊಬೈಲ್ ಸಂಖ್ಯೆ 9449639510, ಅಧ್ಯಕ್ಷ ದಿನೇಶ್ ಮೆದು ಅವರ ಮೊಬೈಲ್ ಸಂಖ್ಯೆ 9008890045ಗೂ ಕರೆ ಮಾಡಬಹುದು.
Comments are closed.