ಉಪ್ಪಿನಂಗಡಿ, ಕರಾಯ ಸೇರಿ ದ.ಕ.ದ 7 ಗ್ರಾಮಗಳು ಸೀಲ್ ಡೌನ್

ಮಂಗಳೂರು, ಎ.18. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು ಏಳು ಗ್ರಾಮಗಳನ್ನು ಕಂಟೈನ್ಮೆಂಟ್ ಝೋನ್ ಆಗಿ ಗುರುತಿಸಿ ಸರಕಾರ ಸೂಚನೆ ಹೊರಡಿಸಿದೆ.

ಅಂತೆಯೇ ಈ ಪ್ರದೇಶಗಳಲ್ಲಿ ಇನ್ಸಿಡೆಂಟ್‌ ಕಮಾಂಡರ್ ಗಳ ನೇಮಕಗೊಳಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ಅದೇಶಿಸಿದ್ದಾರೆ.

ಸೀಲ್ ಡೌನ್ ಆದ ಪ್ರದೇಶಗಳು

  • ಬಂಟ್ವಾಳ ತಾಲೂಕಿನ ಸಜಿಪನಡು ಗ್ರಾಮ, ತುಂಬೆ ಗ್ರಾಮ,
  • ಬೆಳ್ತಂಗಡಿ ತಾಲೂಕಿನ ಕರಾಯ ಗ್ರಾಮ
  • ಪುತ್ತೂರು ತಾಲೂಕಿನ ಸಂಪ್ಯ,
  • ಉಪ್ಪಿನಂಗಡಿ ಗ್ರಾಮ,
  • ಸುಳ್ಯ ತಾಲೂಕಿನ ಅಜ್ಜಾವರ,
  • ಮಂಗಳೂರಿನ ತಾಲೂಕಿನ ತೊಕ್ಕೊಟ್ಟು ಗ್ರಾಮ

ಈ ಗ್ರಾಮಗಳಲ್ಲಿ ಸರ್ಕಾರದ ನಿರ್ದೇಶನದಂತೆ ಸೀಲ್ ಡೌನ್ ಮಾಡಲಾಗಿದ್ದು, ಈ ಪ್ರದೇಶದಲ್ಲಿ ಸಂಪೂರ್ಣ ನಿರ್ಬಂಧ ವಿಧಿಸಲಾಗಿದೆ.
ಈ ಪ್ರದೇಶದಲ್ಲಿ ಆರೋಗ್ಯ ಮತ್ತು ಇತರೆ ಅಗತ್ಯ ಸೌಲಭ್ಯಗಳನ್ನು ಮಾತ್ರ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಉಳಿದ ಯಾವುದೇ ಚಟುವಟಿಕೆಗಳಿಗೆ ಅವಕಾಶ ಇಲ್ಲ.

Comments are closed.