ಬಂಟ್ವಾಳದ ಕುಕ್ಕಿಪಾಡಿಯಲ್ಲಿ ಆಶಾ ಕಾರ್ಯಕರ್ತೆಯ ಮೇಲೆ ಪೊರಕೆಯಿಂದ ಹಲ್ಲೆ

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕುಕ್ಕಿಪಾಡಿ ಎಂಬಲ್ಲಿ ಮನೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಸೇರಿದ್ದ ಜನರ ಬಗ್ಗೆ ವಿಚಾರಿಸಿದ ಆಶಾ ಕಾರ್ಯಕರ್ತೆಯ ಮೇಲೆ ಪೊರಕೆಯಿಂದ ಹಲ್ಲೆಗೆ ಯತ್ನಿಸಿದ ಘಟನೆ ನಡೆದದ್ದು ವರದಿಯಾಗಿದೆ.

ವಿಶ್ವನಾಥ ಎಂಬಾತನಿಂದ ಮನೆಯಲ್ಲಿ ಮಂತ್ರವಾದ‌ ಕಾರ್ಯಗಳು ನಡೆಯುತ್ತಿದ್ದು, ಹೀಗಾಗಿ ಇವರ ಮನೆಗೆ ಹತ್ತಾರು ಜನ ಬರುತ್ತಿದ್ದರು. ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಜನ ಸೇರಿದ್ದನ್ನು ಆಶಾ ಕಾರ್ಯಕರ್ತೆ ಪುಷ್ಪಲತಾ ಅವರು ಪ್ರಶ್ನಿಸಿದ್ದಾರೆ. ಇದಕ್ಕೆವಿಶ್ವನಾಥನ ಮಡದಿ ಶ್ರೀಮತಿ ಎಂಬ ಮಹಿಳೆ ಆಶಾ ಕಾರ್ಯಕರ್ತೆಯ ಮೇಲೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೇ ಹಲ್ಲೆಗೂ ಯತ್ನಸಿದ್ದಾಳೆಂದು ತಿಳಿದುಬಂದಿದೆ.

ಈ ವೇಳೆ ಸ್ಥಳಕ್ಕೆ ಆಗಮಿಸಿದ ಪಂಚಾಯತ್ ಸದಸ್ಯನ ಮೇಲೂ ಹಲ್ಲೆ ಯತ್ನ ನಡೆದಿದೆ ಎಂದು ಹೇಳಲಾಗಿದೆ.ಪ್ರಕರಣಕ್ಕೆ ಸಂಬಂಧಿಸಿದಂತೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Leave A Reply

Your email address will not be published.