ಬೆಳ್ಳಾರೆಯ ಮಾಸ್ತಿಕಟ್ಟೆಯ ಉಮಿಕ್ಕಳದಲ್ಲಿ ದನದ ಮಾಂಸ ದಂಧೆ | ಮೂವರ ಬಂಧನ, ಇಬ್ಬರು ಪರಾರಿ
![](https://hosakannada.com/wp-content/uploads/2024/07/First.jpeg)
ಬೆಳ್ಳಾರೆಯ ಮಾಸ್ತಿಕಟ್ಟೆ ಸಮೀಪ ಉಮಿಕ್ಕಳದಲ್ಲಿ ದನದ ಮಾಂಸ ಮಾಡುತ್ತಿದ್ದಲ್ಲಿಗೆ ಬೆಳ್ಳಾರೆ ಪೊಲೀಸರು ದಾಳಿ ಮಾಡಿ ದನದ ಮಾಂಸ ವಶಪಡಿಸಿಕೊಂಡು ಹಾಗೂ ಮೂವರನ್ನು ಬಂಧಿಸಿದ ಘಟನೆ ಇಂದು ಮುಂಜಾನೆ ನಡೆದಿದೆ.
![](https://hosakannada.com/wp-content/uploads/2024/07/Middle.jpeg)
ಬೆಳ್ಳಾರೆಯ ಮಾಸ್ತಿಕಟ್ಟೆಯಲ್ಲಿ ಮರದ ಅಡಿಯಲ್ಲಿ ದನದ ಮಾಂಸ ಮಾಡುವ ಖಚಿತ ಮಾಹಿತಿ ದೊರೆತ ಬೆಳ್ಳಾರೆ ಪೊಲೀಸರು ದಾಳಿ ಮಾಡಿ ಸುಮಾರು 40 ಕೆ.ಜಿ.ದನದ ಮಾಂಸ ಹಾಗೂ ಮಾಂಸ ಮಾಡಲು ಉಪಯೋಗಿಸಿದ ಕತ್ತಿ, ಚೂರಿ ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಆರೋಪಿಗಳಾದ ಹಾರಿಸ್, ಮಹಮ್ಮದ್ ಸಿನಾನ್, ಉಮ್ಮರ್ ಫಾರೂಕ್ ಎಂಬವರನ್ನು ಬಂಧಿಸಿದ್ದಾರೆ.
ಹೈದರಾಲಿ ಮತ್ತು ಸಲಾಂ ಎಂಬ ಇಬ್ಬರು ಓಡಿ ಪರಾರಿಯಾಗಿದ್ದಾರೆ.