ಮಣಿಪಾಲ | ಕ್ವಾರೆಂಟೈನ್ ನಲ್ಲಿದ್ದ ಕುಂದಾಪುರ ಮೂಲದ ವ್ಯಕ್ತಿ ಸಾವು

ಉಡುಪಿ : ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಮುಂಬೈನಿಂದ ಮರಳಿ ಕ್ವಾರಂಟೈನ್ ನಲ್ಲಿದ್ದ 54 ವರ್ಷದ ವ್ಯಕ್ತಿಯೋರ್ವರು ಸಾವನ್ನಪ್ಪಿದ್ದಾರೆ. ಕೊರೋನಾ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ವ್ಯಕ್ತಿಯ ಗಂಟಲು ದ್ರವದ ಮಾದರಿಯನ್ನು ತಪಾಸಣೆಗೆ ಕಳುಹಿಸಲಾಗಿದೆ.

ವ್ಯಕ್ತಿ ಮುಂಬೈನಿಂದ ಕುಂದಾಪುರ ತಾಲೂಕಿನ ಜಪ್ತಿಯ ತನ್ನೂರಿಗೆ ಮರಳಿದ್ದರು.ಮೇ 13 ರಂದು ಎದೆನೋವು ಕಾಣಿಸಿಕೊಳ್ಳುತ್ತಿದ್ದಂತೆಯೇ ವ್ಯಕ್ತಿಯನ್ನು ಕುಂದಾಪುರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಎದೆನೋವು ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಅವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಾಯಿತು. ಆದರೆ ಚಿಕಿತ್ಸ ಫಲಕಾರಿಯಾಗದೆ ವ್ಯಕ್ತಿ ಸಾವನ್ನಪ್ಪಿದ್ದಾರೆ.

ಇದೀಗ ವ್ಯಕ್ತಿಯ ಗಂಟಲಿನ ದ್ರವವನ್ನು ಪರೀಕ್ಷೆಗಾಗಿ ಕಳುಹಿಸಲಾಗಿದ್ದು, ವರದಿ ಬರಬೇಕಾಗಿದೆ ಎಂದು ಜಿಲ್ಲಾ ಆರೋಗ್ಯ ಇಲಾಖೆಯ ಮೂಲಗಳು ತಿಳಿಸಿವೆ. ಕೊರೊನಾ ಶಂಕೆಯಿಂದಾಗಿ ಜನರಲ್ಲಿ ಆತಂಕ ಹೆಚ್ಚಾಗಿದೆ.

Leave A Reply

Your email address will not be published.