ಇಂದು ಮುಂಜಾನೆ ಟ್ರಕ್ ಗಳ ಮುಖಾಮುಖಿ ಡಿಕ್ಕಿ | 23 ವಲಸೆ ಕಾರ್ಮಿಕರ ದುರಂತ ಸಾವು

ಲಕ್ನೋ: ಕೊರೋನಾ ಲಾಕ್ ಡೌನ್ ನ ನೋವಿನಿಂದ ನೊಂದು ಹೋಗಿರುವ, ಹೇಗಾದರೂ ಮಾಡಿ ತಮ್ಮ ಊರು ಸೇರಿಕೊಳ್ಳುವ ಆಶೆಯಲ್ಲಿದ್ದ 23 ವಲಸೆ ಕಾರ್ಮಿಕರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಲಾಕ್ ಡೌನ್ ಹಿನ್ನೆಲೆಯಲ್ಲಿ ವಲಸೆ ಕಾರ್ಮಿಕರ ಎರಡು ಟ್ರಕ್ ಗಳು ಮುಖಾ ಮುಖಿ ಡಿಕ್ಕಿಯಾಗಿವೆ. ಆಗ ಒಂದು ಟ್ರಕ್ ನಲ್ಲಿದ್ದ 23 ವಲಸೆ ಕಾರ್ಮಿಕರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಔರೈಯಾ ಬಳಿ ನಡೆದಿದೆ.

ರಾಜಸ್ತಾನದಿಂದ ಉತ್ತರ ಪ್ರದೇಶದಲ್ಲಿರುವ ತಮ್ಮ ತಮ್ಮ ನಿವಾಸಗಳಿಗೆ ವಲಸೆ ಕಾರ್ಮಿಕರು ಟ್ರಕ್ ನಲ್ಲಿ ತೆರಳುತ್ತಿದ್ದರು.

ಇಂದು ಶನಿವಾರ ಮುಂಜಾನೆ ಸುಮಾರು 3.30 ರ ಸುಮಾರಿಗೆ ಈ ಅಪಘಾತ ಸಂಭವಿಸಿದ್ದು, 23 ಮಂದಿ ಸಾವನ್ನಪ್ಪಿ, ಸುಮಾರು 15 ರಿಂದ 20 ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಇವರೆಲ್ಲಾ ಜಾರ್ಖಂಡ್ ಮತ್ತು ಪಶ್ಚಿಮ ಬಂಗಾಳ ಮೂಲದವರೆಂದು ತಿಳಿದು ಬಂದಿದೆ.

Leave A Reply

Your email address will not be published.