ರಾಜ್ಯ ಸರಕಾರಗಳು ಕಾರ್ಮಿಕ ಹಿತ ರಕ್ಷಣಾ ಕಾನೂನನ್ನು ರದ್ದು ಗೊಳಿಸಿದ್ದನ್ನು ಪ್ರತಿಭಟಿಸಿ ಮೇ 22 ರಂದು ಕಾರ್ಮಿಕ ಸಂಘಗಳ ದೇಶವ್ಯಾಪಿ ಮುಷ್ಕರ
![](https://hosakannada.com/wp-content/themes/hosakannada/images/default-thumb/full.png)
ನವದೆಹಲಿ: ಅನೇಕ ರಾಜ್ಯ ಸರ್ಕಾರಗಳು ಕಾರ್ಮಿಕ ಹಿತ ರಕ್ಷಣೆ ಕಾನೂನುಗಳನ್ನು ತಾತ್ಕಾಲಿಕವಾಗಿ ರದ್ದುಗೊಳಿಸಿವೆ. ಇದನ್ನು ವಿರೋಧಿಸಿ ಮೇ 22 ರಂದು ಕೇಂದ್ರೀಯ ಕಾರ್ಮಿಕ ಸಂಘಗಳ(ಸಿಟಿಯು) ವತಿಯಿಂದ ದೇಶವ್ಯಾಪಿ ಮುಷ್ಕರಕ್ಕೆ ಕರೆ ನೀಡಲಾಗಿದೆ.
![](https://hosakannada.com/wp-content/uploads/2024/07/First.jpeg)
ಈವರೆಗೆ 10 ಕಾರ್ಮಿಕ ಸಂಘಟನೆಗಳು ಮುಷ್ಕರಕ್ಕೆ ಕರೆ ನೀಡಿವೆ. ಲಾಕ್ಡೌನ್ ಜಾರಿಯಾಗಿರುವುದರಿಂದ ದೇಶದಲ್ಲಿ ಕಾರ್ಮಿಕರ ಸ್ಥಿತಿ ಸಂಕಷ್ಟದಲ್ಲಿದೆ. ಕೆಲಸವಿಲ್ಲದೆ ದುಡಿಯುವ ವರ್ಗ ಸಂಕಷ್ಟದ ಪರಿಸ್ಥಿತಿಯಲ್ಲಿದ್ದು ಇಂತಹ ಸಂದರ್ಭದಲ್ಲಿ ಕಾರ್ಮಿಕ ಹಿತರಕ್ಷಣೆಯ ಕಾನೂನುಗಳನ್ನು ಮೊಟಕುಗೊಳಿಸಲಾಗುತ್ತಿದೆ.
![](https://hosakannada.com/wp-content/uploads/2024/07/Middle.jpeg)
ಕಾರ್ಮಿಕ ಹಿತರಕ್ಷಣೆ ಕಾನೂನು ಕೈಬಿಟ್ಟಿದ್ದ ಉತ್ತರ ಪ್ರದೇಶದ ಯೋಗಿ ನೇತೃತ್ವದ ಸರ್ಕಾರ ಕಾರ್ಮಿಕ ಸಂಘಟನೆಗಳ ಒತ್ತಡಕ್ಕೆ ಮಣಿದು ಆ ಆದೇಶವನ್ನು ಹಿಂಪಡೆಯಿತು.ಕೈಗಾರಿಕೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರ ಕೆಲಸದ ಅವಧಿಯನ್ನು 8ರಿಂದ 12 ಗಂಟೆಗೆ ಹೆಚ್ಚಳ ಮಾಡಲಾಗಿತ್ತು. ರಾಜ್ಯ ಸರ್ಕಾರದ ಈ ತೀರ್ಮಾನಕ್ಕೆ ತೀವ್ರ ಖಂಡನೆ ವ್ಯಕ್ತವಾದ ಹಿನ್ನೆಲೆಯಲ್ಲಿ ಆದೇಶವನ್ನು ಹಿಂಪಡೆಯಲಾಯಿತು ಎನ್ನಲಾಗಿದೆ.