ಸುಬ್ರಹ್ಮಣ್ಯ ಪರಿಸರದಲ್ಲಿ ಗಾಳಿ ಮಳೆ | ರಸ್ತೆ ಸಂಚಾರ ಸ್ಥಗಿತ
ಕುಕ್ಕೆ ಶ್ರೀ ಸುಬ್ರಹ್ಮಣ್ಯ ಪರಿಸರದಲ್ಲಿ ಇಂದು ಮುಂಜಾನೆ ಭಾರೀ ಗಾಳಿ ಮಳೆ ಸುರಿದ ಪರಿಣಾಮವಾಗಿ ರಸ್ತೆಗೆ ಅಡ್ಡಲಾಗಿ ಬೃಹತ್ ಗಾತ್ರದ ಮರಬಿದ್ದು, ಕೆಲಹೊತ್ತು ಸುಬ್ರಹ್ಮಣ್ಯ-ಏನೆಕಲ್ಲು ರಸ್ತೆ
ಸಂಚಾರ ಸ್ಥಗಿತಗೊಂಡ ಘಟನೆ ಸಂಭವಿಸಿದೆ.
![](https://hosakannada.com/wp-content/uploads/2024/07/First.jpeg)
ಏನೆಕಲ್ಲು ಬಳಿಯ ಬೂದಿಪಳ್ಳ ಎಂಬಲ್ಲಿ ಬೃಹತ್ ಗಾತ್ರದ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದ ಪರಿಣಾಮವಾಗಿ ಕೆಲಹೊತ್ತು ರಸ್ತೆ ಸಂಚಾರ ಸ್ಥಗಿತಗೊಂಡಿತ್ತು. ಬಳಿಕ ಮೆಸ್ಕಾಂ ಮತ್ತು ಅರಣ್ಯ ಇಲಾಖೆಯ ಸಿಬ್ಬಂದಿಗಳು ಸೇರಿ ಮರ ತೆರವುಗೊಳಿಸಿದರು.
![](https://hosakannada.com/wp-content/uploads/2024/07/Middle.jpeg)
![](https://hosakannada.com/wp-content/uploads/2020/05/10-12-47-IMG-20200518-WA0008-800x380.jpg)
ಬಾರೀ ಗಾಳಿ ಮಳೆಯಿಂದಾಗಿ ಸುಬ್ರಹ್ಮಣ್ಯಪರ್ವತಮುಖಿ ಸಮೀಪ ಮರಗಳು ಹಾಗೂ ಮರದ ದೊಡ್ಡ ದೊಡ್ಡ ಕೊಂಬೆಗಳು ಮುರಿದು ಬಿದ್ದ ಪರಿಣಾಮವಾಗಿ ಹಲವು ವಿದ್ಯುತ್ ಕಂಬಗಳು ನೆಲಕ್ಕುರುಳಿವೆ.