Breaking News | ಮೂಡುಬಿದ್ರೆಯಲ್ಲಿ ಕ್ವಾರಂಟೈನ್ ನಲ್ಲಿ ಇರುವ ವ್ಯಕ್ತಿ ಆತ್ಮಹತ್ಯೆ

Share the Article

ಮೂಡುಬಿದ್ರೆಯಲ್ಲಿ ಕ್ವಾರಂಟೈನ್ ನಲ್ಲಿ ಇರುವ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಮಾಹಿತಿ ಇದೀಗ ಲಭ್ಯವಾಗಿದೆ.

ಮೂಡುಬಿದ್ರೆಯ ಕಡಂದಲೆಯಲ್ಲಿ ಕ್ವಾರಂಟೈನ್ ನಲ್ಲಿ ವ್ಯಕ್ತಿಯೊಬ್ಬರು ಮೇ.21 ರ ಗುರುವಾರ ಬೆಳಗ್ಗೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡುಬಿದಿರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಆತ್ಮಹತ್ಯೆಗೆ ಶರಣಾದವರನ್ನು ಧನಂಜಯ್ ಪೂಜಾರಿ ಎಂದು ಗುರುತಿಸಲಾಗಿದೆ. ಬುಧವಾರ ರಾತ್ರಿ ಮುಂಬೈಯಿಂದ ಬಂದು ಕಡಂದಲೆಯಲ್ಲಿ ಶಾಲೆಯೊಂದರಲ್ಲಿ ಕ್ವಾರಂಟೈನ್‌ನಲ್ಲಿದ್ದರು.

ಅವರು ಕೊರೋನಾ ಬಗ್ಗೆ ಭಯಗ್ರಸ್ಥರಾಗಿದ್ದರು. ಅಲ್ಲದೆ ಮುಂದಿನ ಜೀವನೋಪಾಯದ ಬಗ್ಗೆ ಆತಂಕಿತರಾಗಿದ್ದರು ಎಂದು ತಿಳಿದುಬಂದಿದೆ.

Leave A Reply