ಮಂಗಳೂರು ವಿಮಾನ ದುರಂತದಲ್ಲಿ ಮಡಿದವರಿಗೆ ನಳಿನ್,ಕೋಟ ನಮನ
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 10 ವರುಷಗಳ ಹಿಂದೆ ಸಂಭವಿಸಿದ್ದ ಭೀಕರ ವಿಮಾನ ಅಪಘಾತದಲ್ಲಿ ಮೃತಪಟ್ಟವರಿಗೆ ಇಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ದ.ಕ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಶ್ರದ್ಧಾಂಜಲಿ ಸಲ್ಲಿಸಿದರು.
![](https://hosakannada.com/wp-content/uploads/2024/07/First.jpeg)
ಮೇ 22, 2010 ರಂದು ದುಬೈ ನಿಂದ ಬಂದಿದ್ದ ಏರ್ ಇಂಡಿಯಾದ ವಿಮಾನ ಅಪಘಾತಕ್ಕೀಡಾಗಿ 158 ಜನರು ಮೃತಪಟ್ಟಿದ್ದರು.
![](https://hosakannada.com/wp-content/uploads/2024/07/Middle.jpeg)
ಮೃತರ ನೆನಪಿನಲ್ಲಿ ಪಣಂಬೂರು- ತಣ್ಣೀರುಬಾವಿ ರಸ್ತೆಯಲ್ಲಿ ಸ್ಮಾರಕ ಉದ್ಯಾನವೊಂದನ್ನು ನಿರ್ಮಿಸಲಾಗಿದ್ದು, ಪ್ರತಿವರ್ಷ ಇಲ್ಲಿ ಮೃತಪಟ್ಟವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಗುತ್ತದೆ.