ರಾಜ್ಯಾದ್ಯಂತ ಜೂನ್ 1 ರಿಂದ ದೇವಾಲಯಗಳು ಓಪನ್
ಜೂನ್ 1ರಿಂದ ರಾಜ್ಯದ ಎಲ್ಲಾ ದೇವಸ್ಥಾನಗಳನ್ನು ತೆರೆಯಲಾಗುತ್ತದೆ ಎಂದು ಸಚಿವ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.ಇಂದು ಸಿಎಂ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನತೆಗೆದುಕೊಳ್ಳಲಾಗಿದೆ. ಜೂನ್ 1ರಿಂದ ರಾಜ್ಯದ ಎಲ್ಲಾ ದೇಗುಲಗಳು ಬಾಗಿಲು ತೆರೆಯಲಿದ್ದು, ಭಕ್ತರಿಗೆ ದರ್ಶನಕ್ಕೆ ಅವಕಾಶ ಒದಗಿಸಲಾಗುತ್ತದೆ.
![](https://hosakannada.com/wp-content/uploads/2024/07/First.jpeg)
ದೇವಾಲಯಗಳನ್ನು ತೆರೆಯುವಂತೆ ಭಕ್ತರಿಂದ ತೀವ್ರ ಒತ್ತಡ ಬಂದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಈ ನಿರ್ಧಾರ ಕೈಗೊಂಡಿದ್ದೇವೆ ಎಂದು ತಿಳಿಸಿದರು.ಆದರೆ ದೇವಸ್ಥಾನಗಳಲ್ಲಿ ಜಾತ್ರೆ ಹಾಗೂ ಸಮಾರಂಭಗಳನ್ನು ನಡೆಸುವುದಕ್ಕೆ ಅವಕಾಶವನ್ನು ನಿರಾಕರಿಸಲಾಗಿದೆ. ಎಲ್ಲಾ ದೇವಾಲಯಗಳಲ್ಲಿಯೂ ಭಕ್ತರು ತಮ್ಮ ಹಿತದೃಷ್ಟಿಯಿಂದ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದು ಕಡ್ಡಾಯವಾಗಿದೆ ಎಂದರು.
![](https://hosakannada.com/wp-content/uploads/2024/07/Middle.jpeg)
ಕುಕ್ಕೆ ಸುಬ್ರಹ್ಮಣ್ಯ, ಕೊಲ್ಲೂರು ಮೂಕಾಂಬಿಕೆ, ಕಟೀಲು ದುರ್ಗಾಪರಮೇಶ್ವರಿ, ಮೈಸೂರಿನ ಚಾಮುಂಡಿ, ಬೆಂಗಳೂರಿನ ಬನಶಂಕರಿ, ನಂಜನಗೂಡಿನ ನಂಜುಂಡೇಶ್ವರ ದೇವಸ್ಥಾನ ಸೇರಿದಂತೆ ರಾಜ್ಯದಲ್ಲಿ ಮುಜರಾಯಿ ಇಲಾಖೆಯ ವ್ಯಾಪ್ತಿಗೆ ಸೇರಿರುವ ಸುಮಾರು 36,000 ದೇವಾಲಯಗಳು ಸೋಮವಾರದಿಂದ ಬಾಗಿಲು ತೆರೆಯಲಿವೆ.