ಎಲ್ಲಾ ರೈತರಿಗೆ ತಲಾ 5 ಸಾವಿರ ರೂಪಾಯಿ ಮತ್ತು ಕ್ಷೌರಿಕರಿಗೆ ಮತ್ತು ಆಟೋ ಚಾಲಕರಿಗೆ ಹಣ ಪಡೆಯಲು ವಿಧಿಸಿದ್ದ ಷರತ್ತು ವಾಪಾಸ್- ರಾಜ್ಯ ಸರಕಾರ ನಿರ್ಧಾರ

ರಾಜ್ಯದ ಜನರಿಗೆ ಕೋವಿಡ್​ ಪರಿಹಾರವಾಗಿ ಪರಿಹಾರ ನೀಡುವ ಕುರಿತು ಸರ್ಕಾರ ಕೆಲವು ಮಹತ್ವದ ನಿರ್ಧಾರಗಳನ್ನು ತೆಗೆದುಕೊಂಡಿದೆ. ಪರಿಹಾರ ಹಂಚಿಕೆ ಕುರಿತು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಮಾಧುಸ್ವಾಮಿ ಮಾಹಿತಿ ನೀಡಿದ್ದಾರೆ. ಎಲ್ಲ ರೈತರಿಗೆ ತಲಾ 5 ಸಾವಿರ ರೂಪಾಯಿ ಮತ್ತು ಕ್ಷೌರಿಕರಿಗೆ ಮತ್ತು ಆಟೋ ಚಾಲಕರಿಗೆ ಹಣ ಪಡೆಯಲು ವಿಧಿಸಿದ್ದ ಷರತ್ತುಗಳನ್ನು ಹಿಂಪಡೆದಿರುವುದಾಗಿ ಹೇಳಿದ್ದಾರೆ.

ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಕೆಲವು ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದ್ದು, ಈ ಕುರಿತಾದ ಮಾಹಿತಿಯನ್ನು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಮಾಧುಸ್ವಾಮಿ ಮಾಹಿತಿ ನೀಡಿದರು.

ಸಂಪುಟ ಸಭೆ ಬಳಿಕ ಮಾತನಾಡಿದ ಅವರು, ಮಹಾರಾಷ್ಟ್ರ, ಗುಜರಾತ್​, ಮಧ್ಯ ಪ್ರದೇಶ, ತಮಿಳುನಾಡು ಮತ್ತು ರಾಜಸ್ಥಾನದಿಂದ ಕರ್ನಾಟಕಕ್ಕೆ​ ಬರುವವರಿಗೆ ಇನ್ನೂ 15 ದಿನಗಳ ಕಾಲ ನಿಷೇಧ ಹೇರಲಾಗಿದೆ ಎಂದು ತಿಳಿಸಿದ್ದಾರೆ.

ಮತ್ತೊಂದೆಡೆ ರಾಜ್ಯದ ಜನರಿಗೆ ಕೋವಿಡ್​ ಪರಿಹಾರವಾಗಿ ಇತ್ತೀಚೆಗೆ ಘೋಷಿಸಿದ್ದ ಅನುದಾನ ಹಂಚಿಕೆ ಕುರಿತು ಸಚಿವರು ಮಾಹಿತಿ ನೀಡಿದರು.

ಈವರೆಗೆ ಯಾರಿಗೂ ಸರ್ಕಾರದಿಂದ ಪರಿಹಾರ ಸಿಕ್ಕಿಲ್ಲವೆಂಬ ಆರೋಪಗಳು ಕೇಳಿಬಂದ ಹಿನ್ನೆಲೆ ಸಚಿವರು ಪ್ರತಿಕ್ರಿಯಿಸಿ, ಈ ಪರಿಹಾರ ಪಡೆಯಲು ಹೇರಿದ್ದ ನಿಯಮಗಳನ್ನು ಹಿಂಪಡೆಯಲಾಗಿದೆ ಎಂದರು.

*ಎಲ್ಲ ರೈತರಿಗೆ 5 ಸಾವಿರ ರೂಪಾಯಿ ಪರಿಹಾರ.

*ಸಲೂನ್​, ಆಟೋ ಚಾಲಕರಿಗೆ ಪರಿಹಾರ ನೀಡುವುದಕ್ಕೆ ಹಾಕಿದ್ದ ಷರತ್ತುಗಳು ರದ್ದು

*ಪಿಎಸ್​ಐ ನೇಮಕಾತಿಗೆ ವಯೋಮಿತಿ ಹೆಚ್ಚಳ
ಸಾಮಾನ್ಯ ವರ್ಗಕ್ಕೆ 28 ರಿಂದ 30 ವರ್ಷಎಸ್​ಸಿ/ಎಸ್​ಟಿಗೆ 30 ರಿಂದ 32 ವರ್ಷ ವಯೋಮಿತಿ ನಿಗದಿಮುಂದಿನ ಒಂದು ಬಾರಿಯ ನೇಮಕಾತಿಗೆ ಮಾತ್ರ ಈ ಅವಕಾಶ

* ಉಡುಪಿ, ಚಾಮರಾಜನಗರ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ ಮತ್ತು ಚಾಮರಾಜನಗರ ಜಿಲ್ಲೆಯಲ್ಲಿ ಔಷಧಿ ಉಗ್ರಾಣ ನಿರ್ಮಾಣಕ್ಕೆ 18 ಕೋಟಿ ರೂ 

*ಅನುದಾನ ಕಾರ್ಮಿಕರ ಹೆಚ್ಚುವರಿ ಕೆಲಸದ ಅವಧಿ ಆದೇಶ ವಾಪಸ್

Leave A Reply

Your email address will not be published.