ಸರ್ವೆಯ ಮೂವರಿಗೆ ಕೊರೋನಾ ಧೃಢಪಟ್ಟ ಹಿನ್ನೆಲೆ | ಕ್ವಾರಂಟೈನ್ ಕೇಂದ್ರದ ವಾರ್ಡನ್ ಸೇರಿ ಮೂವರಿಗೆ ಕ್ವಾರಂಟೈನ್ !

ಪುತ್ತೂರು: ಸರ್ವೆ ಗ್ರಾಮದ ಕಲ್ಪಣೆ ಬಿಸಿಎಂ ಹಾಸ್ಟೆಲ್‌ನಲ್ಲಿ ಕ್ವಾರಂಟೈನ್‌ನಲ್ಲಿದ್ದ ಮೂರು ಮಂದಿಗೆ ಕೊರೋನಾ ಸೋಂಕು ಧೃಢಪಟ್ಟಿರುವ ಹಿನ್ನೆಲೆಯಲ್ಲಿ ಹಾಸ್ಟೆಲ್‌ನ ವಾರ್ಡನ್ ಹಾಗೂ ಇಬ್ಬರು ಸಿಬ್ಬಂದಿಗಳನ್ನು ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ ಎಂದು ತಿಳಿದು ಬಂದಿದೆ.

ಮುಂಬೈಯಿಂದ ಆಗಮಿಸಿದ್ದ ಸರ್ವೆ ಗ್ರಾಮದ ದಂಪತಿ ಹಾಗೂ ಪುತ್ರಿಯನ್ನು ಕಲ್ಪಣೆಯಲ್ಲಿರುವ ಹಾಸ್ಟೆಲ್‌ನಲ್ಲಿ ಕ್ವಾರಂಟೈನ್ ಮಾಡಲಾಗಿತ್ತು.

ಮೇ.28 ಹೆಲ್ತ್ ಬುಲೆಟಿನ್ ನಲ್ಲಿ ಮೂವರಿಗೂ ಕೊರೋನಾ ಸೋಂಕು ಇರುವುದು ಧೃಢಪಟ್ಟಿದ್ದು ಅವರನ್ನು ಕೋವಿಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮುಂಜಾಗ್ರತಾ ಕ್ರಮವಾಗಿ ಹಾಸ್ಟೆಲ್‌ನ ವಾರ್ಡನ್ ಹಾಗೂ ಇಬ್ಬರು ಸಿಬ್ಬಂದಿಗಳಿಗೆ ಪುತ್ತೂರಿನ ಹಾಸ್ಟೆಲ್‌ವೊಂದರಲ್ಲಿ ಕ್ವಾರಂಟೈನ್ ಮಾಡಿರುವುದಾಗಿ ತಿಳಿದು ಬಂದಿದೆ.

Leave A Reply

Your email address will not be published.