ಬಿಜೆಪಿಯಲ್ಲಿ ಯಾವುದೇ ಗೊಂದಲ ಇಲ್ಲ | ಬಿಎಸ್ವೈ ಸರಕಾರ ಪೂರ್ಣಾವಧಿ ಪೂರೈಸಲಿದೆ- ನಳಿನ್ ಕುಮಾರ್
![](https://hosakannada.com/wp-content/themes/hosakannada/images/default-thumb/full.png)
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿ ಸರಕಾರ ಪೂರ್ಣ ಅವಧಿ ಪೂರೈಸಲಿದೆ. ರಾಜ್ಯ ಬಿಜೆಪಿಯಲ್ಲಿ ಯಾವುದೇ ಭಿನ್ನಮತ, ಗೊಂದಲಗಳು ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ,ದ.ಕ. ಸಂಸದ ನಳಿನ್ ಕುಮಾರ್ ಕಟೀಲು ಹೇಳಿಕೆ ನೀಡಿದ್ದಾರೆ.
![](https://hosakannada.com/wp-content/uploads/2024/07/First.jpeg)
ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್ ಅವರು ಬಿಜೆಪಿಯಲ್ಲಿ ಭಿನ್ನಾಭಿಪ್ರಾಯವಿದೆ ಎಂದು ಹಗಲುಗನಸು ಕಾಣುತ್ತಿದ್ದಾರೆ. ಆದರೆ ಬಿಜೆಪಿ ಸರಕಾರ ತನ್ನ ಪೂರ್ಣಾವಧಿಯನ್ನು ಯಶಸ್ವಿಯಾಗಿ ಪೂರೈಸುತ್ತದೆ. ಯಡಿಯೂರಪ್ಪ ಅವರೇ ಮುಖ್ಯಮಂತ್ರಿಯಾಗಿರುತ್ತಾರೆ ಎಂದರು.
![](https://hosakannada.com/wp-content/uploads/2024/07/Middle.jpeg)
![](https://hosakannada.com/wp-content/uploads/2020/05/unnamed.jpg)
ಪಕ್ಷದ ಶಾಸಕರು ಸಭೆ ನಡೆಸಿ ಕ್ಷೇತ್ರದ ಅಭಿವೃದ್ಧಿ ಕಾರ್ಯ ಹಾಗೂ ಪಕ್ಷ ಸಂಘಟನೆ ಬಗ್ಗೆ ಚರ್ಚೆ ನಡೆಸಿದ್ದಾರೆ. ಅದರಲ್ಲಿ ತಪ್ಪೇನು ಇಲ್ಲ, ಅದಾಗ್ಯೂ ಬಿಜೆಪಿಗೆ ತನ್ನದೇ ಆದ ಶಿಸ್ತು ಇದೆ, ಅದನ್ನು ಉಲ್ಲಂಘಿಸಿದರೆ ಪಕ್ಷದ ವರಿಷ್ಠರ ಗಮನಕ್ಕೆ ತಂದು ಶಿಸ್ತು ಕ್ರಮ ತೆಗೆದುಕೊಳ್ಳಲಾಗುವುದು ಎಂದರು.