ಕಡಬ ತಾಲೂಕಿಗೂ ಕಾಲಿಟ್ಟ ಮಿಡತೆಗಳ ಹಿಂಡು
![](https://hosakannada.com/wp-content/themes/hosakannada/images/default-thumb/full.png)
ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾ.ಪಂ ವ್ಯಾಪ್ತಿಯ ವ್ಯಕ್ತಿಯೊಬ್ಬರ ತೋಟದಲ್ಲಿ ಮಿಡತೆಗಳ ಗುಂಪು ಇರುವುದು ಪತ್ತೆಯಾಗಿದೆ.
![](https://hosakannada.com/wp-content/uploads/2024/07/First.jpeg)
ರೆಂಜಿಲಾಡಿಯ ವಿಶ್ವನಾಥ ಎಂಬವರ ತೋಟದಲ್ಲಿ ಗುಂಪಾಗಿ ಆಗಮಿಸಿದ ಮಿಡತೆಗಳು ಮರದ ಎಲೆಗಳನ್ನು ತಿನ್ನುತ್ತಿವೆ.
![](https://hosakannada.com/wp-content/uploads/2024/07/Middle.jpeg)
![](https://hosakannada.com/wp-content/uploads/2020/05/IMG-20200530-WA0025-667x500.jpg)
ಈಗಾಗಲೇ ನೆರೆಯ ಪಾಕಿಸ್ತಾನದಿಂದ ಬಂದಿರುವ ಮರುಭೂಮಿ ರಕ್ಕಸ ಮಿಡತೆಗಳು ಉತ್ತರ ಭಾರತದ ಒಂದೊಂದೇ ರಾಜ್ಯಗಳಿಗೆ ತಮ್ಮ ಸಾಮ್ರಾಜ್ಯ ವಿಸ್ತರಿಸುತ್ತಿವೆ. ಈಗಾಗಲೇ 7 ರಾಜ್ಯಗಳಲ್ಲಿ ತನ್ನ ಹಾವಳಿ ಪ್ರಾರಂಭಿಸಿರುವ ಮಿಡತೆಗಳು ಕೃಷಿ ಭೂಮಿಯಲ್ಲಿನ ಬೆಳೆಗಳಿಗೆ ಮುತ್ತಿಗೆ ಹಾಕಿವೆ.
ಮರುಭೂಮಿ ಪ್ರದೇಶದಲ್ಲಿ ಹೆಚ್ಚಾಗಿ ಕಂಡುಬರುವ ಕೃಷಿ ಬೆಳೆಗಳಿಗೆ ಮಾರಕವಾಗಿರುವ ಈ ಮಿಡತೆಗಳ ಹಾವಳಿಗೆ ಉತ್ತರಭಾರತದ ಹಲವು ರಾಜ್ಯಗಳು ಈಗಾಗಲೇ ತತ್ತರಿಸಿದ್ದು ಮುಂದಿನ ದಿನಗಳಲ್ಲಿ ಮಿಡತೆಗಳು ದಕ್ಷಿಣ ಭಾರತದ ರಾಜ್ಯಗಳಿಗೆ ದಾಳಿ ಮಾಡುವ ಸಂಭವ ಹೆಚ್ಚಾಗಿದೆ.