ಕರಾವಳಿಯಲ್ಲಿ ಮೇಘ ಸ್ಫೋಟವಾಗುವ ಸಾಧ್ಯತೆ | ದಡಕ್ಕೆ ಇಂದೇ ಮರಳುವಂತೆ ಮೀನುಗಾರರಿಗೆ ಸೂಚನೆ
![](https://hosakannada.com/wp-content/themes/hosakannada/images/default-thumb/full.png)
ನವದೆಹಲಿ : ಅರಬ್ಬಿ ಸಮುದ್ರದಲ್ಲಿ ಎದ್ದಿರುವ ಭಾರೀ ಚಂಡಮಾರುತದಿಂದಾಗಿ ಕರ್ನಾಟಕ ಕರಾವಳಿ ತೀರದಲ್ಲಿ ಇಂದು ಮತ್ತು ನಾಳೆ ಭಾರೀ ಮಳೆಯಾಗುವ ಸಾಧ್ಯತೆಯಿದೆ.
![](https://hosakannada.com/wp-content/uploads/2024/07/First.jpeg)
ಕರ್ನಾಟಕ, ಕೇರಳ, ಲಕ್ಷದ್ವೀಪ, ಗೋವಾ, ಮಹಾರಾಷ್ಟ್ರ ಮತ್ತು ಗುಜರಾತ್ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ಫಾಕ್ಸ್ ಸಂದೇಶ ಕಳುಹಿಸಿ ಕರಾವಳಿ ಭಾಗದಲ್ಲಿ ಕಟ್ಟೆಚ್ಚರದಲ್ಲಿರುವಂತೆ ಕೇಂದ್ರ ಗೃಹ ಸಚಿವಾಲಯದ ವಿಪತ್ತು ನಿರ್ವಹಣಾ ವಿಭಾಗ ಸೂಚಿಸಿದೆ.
![](https://hosakannada.com/wp-content/uploads/2024/07/Middle.jpeg)
ಕರ್ನಾಟಕ, ಕೇರಳ ಮತ್ತು ಲಕ್ಷದ್ವೀಪದಲ್ಲಿ ಮೇ 31 ಮತ್ತು 1 ರಂದು ಭಾರೀ ಮಳೆಯಾಗುವ ಸಂಭವ ಇದ್ದರೆ, ಮಹಾರಾಷ್ಟ್ರದಲ್ಲಿ ಜೂನ್ 2 ರಿಂದ 4 ರವರೆಗೆ ಮಳೆಯಾಗಲಿದೆ. ಗುಜರಾತಿನಲ್ಲಿ ಜೂನ್ 3 ರಿಂದ 5 ರವರೆಗೆ ಮಳೆಯಾಗಲಿದೆ ಎಂದು ಹೇಳಿದೆ.
ಕರ್ನಾಟಕದಲ್ಲಿ, ಜೂನ್ 2 ರ ವೇಳೆಗೆ 90 ರಿಂದ100 ಕಿ.ಮೀ ವೇಗದಲ್ಲಿ ಗಾಳಿ ಬೀಸಬಹುದು. ಈ ಸಮಯದಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಮತ್ತು ಮೀನುಗಾರಿಕೆಗೆ ತೆರಳಿದ ಮೀನುಗಾರು ಇಂದೇ ಮರಳಿ ದಡ ಸೇರಬೇಕು ಎಂದು ಕೇಂದ್ರದಿಂದ ಸೂಚಿಸಲಾಗಿದೆ.