ಅಕ್ರಮ ಕಸಾಯಿಖಾನೆಗೆ ಪೊಲೀಸರ ದಾಳಿ | 164 ಕೆ.ಜಿ ಮಾಂಸ ಸಹಿತ ಇಬ್ಬರು ವಶಕ್ಕೆ

ಮಂಗಳೂರಿನ ಅಡ್ಡೂರು ಎಂಬಲ್ಲಿ ಕಾರ್ಯಾಚರಿಸುತ್ತಿರುವ ಅಕ್ರಮ ಕಾಸಾಯಿಖಾನೆಗೆ ದಾಳಿ ನಡೆಸಿದ ಪೊಲೀಸರು 164 ಕೆ.ಜಿ. ದನದ ಮಾಂಸ ವಶಕ್ಕೆ ಪಡೆದು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತರನ್ನು ಪಾಂಡೇಲು ಗದ್ದೆ ಮನೆ ನಿವಾಸಿಗಳಾದ ಅಬ್ದುಲ್ ಮಜೀದ್(35), ಮುಸ್ತಫಾ(30) ಎಂದು ತಿಳಿದು ಬಂದಿದೆ.

ಆರೋಪಿಗಳು ದನವನ್ನು ಕದ್ದು ತಂದು ಅಕ್ರಮ ಕಾಸಾಯಿಖಾನೆಯಲ್ಲಿ ಮಾಂಸ ಮಾರಾಟ ಮಾಡುತ್ತಿರುವುದಾಗಿ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಬಜ್ಪೆ ಪೊಲೀಸ್ ಠಾಣೆಯ ಪಿಎಸ್‌ಐ ಪೂವಪ್ಪ ನೇತೃತ್ವದ ತಂಡ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.

ಸುಮಾರು 164 ಕೆ.ಜಿ. ದನದ ಮಾಂಸ, ಕೃತ್ಯಕ್ಕೆ ಬಳಸಿದ್ದ ಚೂರಿ, ಕತ್ತಿ, ಇಲೆಕ್ಕ್ಟ್ರಿಕ್ ತಕ್ಕಡಿ, ಸಹಿತ ಸುಮಾರು 40 ಸಾವಿರಕ್ಕೂ ಅಧಿಕ ವೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದು ಕೊಂಡಿದ್ದಾರೆ.

ಬಜ್ಪೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Leave A Reply

Your email address will not be published.