ಕಾರು ಲಾರಿ ಭೀಕರ ಅಪಘಾತ, ಸ್ಥಳದಲ್ಲೇ ಇಬ್ಬರ ಸಾವು | ಡಿಕ್ಕಿಯ ತೀವ್ರತೆಗೆ ಮುದ್ದೆಯಾಗಿ ಹೋದ ಕಾರು

Share the Article

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದ ಹೆಬ್ಬುಳ ಬಳಿ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಲಾರಿ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ, ಉಳಿದ ನಾಲ್ವರು ಗಾಯಗೊಂಡಿದ್ದಾರೆ.

ಅಂಕೋಲಾ ತಾಲ್ಲೂಕಿನ ಅವರ್ಸಾದ ಗುರುಪ್ರಸಾದ ಅಣೇಕರ (32) ಹಾಗೂ ಸಂಜನಾ ಸಂತೋಷ ರಾಯ್ಕರ (7) ಮೃತರು.
ಅಪಘಾತದ ತೀವ್ರತೆಗೆ ಕಾರು ಕಬ್ಬಿಣದ ಮುದ್ದೆಯಾಗಿ ಹೋಗಿದೆ.
ಸಂತೋಷ ರಾಯ್ಕರ, ಪತ್ನಿ ಅಶ್ವಿನಿ ರಾಯ್ಕರ , ಮಗ ಸೋಹಂ ರಾಯ್ಕರ ಹಾಗೂ ಪ್ರೀತಂ ರೇವಣಕರ ಇವರಿಗೆ ಗಾಯಗಳಾಗಿದ್ದು, ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಹಾರಾಷ್ಟ್ರದ ಲಾರಿ ಅದಾಗಿದ್ದು ಅದು ಅಂಕೋಲಾದಿಂದ ಯಲ್ಲಾಪುರ ಮಾರ್ಗವಾಗಿ ಚಲಿಸುತ್ತಿತ್ತು. ಹೆಬ್ಬುಳದ ಬಳಿಯಲ್ಲಿ ಲಾರಿ ಚಾಲಕನ ಅಜಾಗರೂಕತೆಯಿಂದ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.

ಗುರುಪ್ರಸಾದ ಅವರು ಪುಣೆಯಲ್ಲಿ ನೆಲೆಸಿರುವ ತಮ್ಮ ಅಕ್ಕನ ಕುಟುಂಬವನ್ನು ಯುಗಾದಿ ಹಬ್ಬದ ನಿಮಿತ್ತ ಅವರ್ಸಾಕ್ಕೆ ಕಾರಿನಲ್ಲಿ ಕರೆದುಕೊಂಡು ಬರುತ್ತಿದ್ದರು. ಆಗ ಈ ಅವಘಡ ಸಂಭವಿಸಿದೆ.

Leave A Reply

Your email address will not be published.