ಸುರಿಬೈಲು : ಪಿಕಪ್-ಸ್ಕೂಟರ್ ನಡುವೆ ಡಿಕ್ಕಿ | ಓರ್ವ ಸಾವು, ಇನ್ನೊಬ್ಬ ಗಂಭೀರ

ವಿಟ್ಲ: ಪಿಕಪ್ ವಾಹನ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟು ಸಹಸವಾರ ಗಂಭೀರ ಗಾಯಗೊಂಡ ಘಟನೆ   ಕೊಳ್ನಾಡು ಗ್ರಾಮದ ಸುರಿಬೈಲು ಎಂಬಲ್ಲಿ ನಡೆದಿದೆ.

ಕಲ್ಲಡ್ಕ ಕಡೆಯಿಂದ ಸಾಲೆತ್ತೂರು ಕಡೆಗೆ ಬರುತ್ತಿದ್ದ ಪಿಕಪ್‌ ವಾಹನ ಚಾಲಕನ ಅತೀ ವೇಗ ಹಾಗೂ ಅಜಾಗರೂಕತೆಯಿಂದ ರಸ್ತೆಯ ಬಲ ಬದಿಗೆ ಚಾಲನೆ ಮಾಡಿ ಸಾಲೆತ್ತೂರು ಕಡೆಯಿಂದ ಕಲ್ಲಡ್ಕ ಕಡೆಗೆ ಸಂತೋಷ್ ಹಾಗೂ ರಂಜಿತ್ ರವರು ಚಲಾಯಿಸಿಕೊಂಡು ಬರುತ್ತಿದ್ದ ಸ್ಕೂಟರ್‌ಗೆ ಸುರಿಬೈಲು ತಿರುವಿನಲ್ಲಿ ಡಿಕ್ಕಿ ಹೊಡೆದಿದೆ.

ಪರಿಣಾಮ ಸ್ಕೂಟರ್‌ ಸವಾರ ಸಂತೋಷ್‌ ಹಾಗೂ ಸಹ ಸವಾರ ರಂಜಿತ್‌ ಸ್ಕೂಟರ್‌ ಸಮೇತ ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡರು, ಇವರನ್ನು ಚಿಕಿತ್ಸೆಗಾಗಿ ಬಂಟ್ವಾಳ ಸರಕಾರಿ ಆಸ್ವತ್ರೆಗೆ ದಾಖಲಿಸಿ,  ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಜಿಲ್ಲಾ ಸರಕಾರಿ ವೆನ್ಲಾಕ್‌ ಆಸ್ವತ್ರೆಗೆ ದಾಖಲಿಸಲಾಗಿದ್ದು, ಅಲ್ಲಿ ಗಾಯಾಳು ಸಂತೋಷ್‌ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

Leave A Reply

Your email address will not be published.