ದರೋಡೆ ಪ್ರಕರಣ: ಪುತ್ತೂರು ವಿ.ಸ. ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿದ್ದ ಅಬ್ದುಲ್ ಬಶೀರ್ ಬಂಧನ | ಸಮಾಜ ಸೇವೆಯ ಸೋಗಿನಲ್ಲಿ ಅಕ್ರಮಗಳಿಗೆ ನೆರವು

      

ಮಂಗಳೂರು  ದ.ಕ.ಜಿಲ್ಲೆಯ ಮೂಡುಬಿದಿರೆ, ಮುಲ್ಕಿ, ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಹನ ಸವಾರರನ್ನು ಅಡ್ಡಗಟ್ಟಿ ದ್ವಿಚಕ್ರ ವಾಹನ, ಹಣ ಮತ್ತಿತರ ವಸ್ತುಗಳನ್ನು ದಡೋಡೆ ಮಾಡುತ್ತಿದ್ದ ಪ್ರಕರಣದ ಮತ್ತೊಬ್ಬ ಆರೋಪಿ ಪುತ್ತೂರಿನ ಕೆದಂಬಾಡಿ ಗ್ರಾಮದ ಅಬ್ದುಲ್ ಬಶೀರ್ (40) ಎಂಬಾತನನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ.

ಈಗಾಗಲೆ ಬಂಧಿತ ಆರೋಪಿಗಳಿಗೆ ಈತನು ಕೃತ್ಯ ನಡೆಸಲು ಬೇಕಾದ ಹಣಕಾಸಿನ ನೆರವನ್ನು ನೀಡುತ್ತಿದ್ದ ಎನ್ನಲಾಗಿದೆ. ಈಗಾಗಲೆ ಈತನ ವಿರುದ್ಧ ಮನೆಯೊಂದರ ದರೋಡೆಗೆ ಸಂಚು ರೂಪಿಸಿದ ಪ್ರಕರಣವು ಉಪ್ಪಿನಂಗಡಿ ಠಾಣೆಯಲ್ಲಿ ದಾಖಲಾಗಿದೆ.

2018ರಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಪುತ್ತೂರು ವಿಧಾನ ಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋತಿದ್ದ. ಸಮಾಜಸೇವೆಯ ಮುಖವಾಡದಲ್ಲಿ ಹಲವಾರು ಅಕ್ರಮ ಚಟುವಟಿಕೆಗಳಿಗೆ ಸಹಕರಿಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

Leave A Reply

Your email address will not be published.