ಜಲಪಾತಕ್ಕೆ ಬಿದ್ದು ಇಬ್ಬರ ದಾರುಣ ಸಾವು

ಜಲಪಾತಕ್ಕೆ ಬಿದ್ದು ಇಬ್ಬರು ದಾರುಣವಾಗಿ ಸಾವು ಕಂಡಿದ್ದಾರೆ.
ಮೃತರನ್ನು ಸುಂಟಿಕೊಪ್ಪದ ಶಶಿಕುಮಾರ್ (32) ಮತ್ತು ದಿವ್ಯ (20) ಎಂದು ಗುರುತಿಸಲಾಗಿದೆ.

ಸೋಮವಾರಪೇಟೆ ತಾಲೂಕಿನ ಮಲ್ಲಳ್ಲಿ ಜಲಪಾತ ವೀಕ್ಷಣೆಯ ಸಂದರ್ಭ ಈ ದುರ್ಘಟನೆ ನಡೆದಿದೆ. ಇಂದು ಬೆಳಗ್ಗೆ 9.30 ಗಂಟೆ ಸುಮಾರಿಗೆ ವೀಕೆಂಡ್ ಹಿನ್ನೆಲೆಯಲ್ಲಿ ಆರು ಜನರ ತಂಡ ಜಲಪಾತಕ್ಕೆ ಹೊರಟಿತ್ತು. ಅಲ್ಲಿ ಮೈಮರೆತು, ತಮ್ಮನ್ನು ತಾವು ತೊಡಗಿಸಿಕೊಂಡಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ಜಲಪಾತದ ಕೆಳಗೆ ದಿವ್ಯಾ ಜಾರಿದ್ದಾಳೆ. ಆಕೆಯನ್ನು ರಕ್ಷಿಸಲು ಹೋಗಿ ಶಶಿಕುಮಾರ್ ಸಹ ನೀರಿನೊಳಗೆ ಬಿದ್ದು ಬಿಟ್ಟಿದ್ದಾರೆ. ಅನಿರೀಕ್ಷಿತವಾಗಿ ಇಬ್ಬರೂ ನೀರುಪಾಲಾಗಿದ್ದಾರೆ.

ಈ ಸಾವಿನಿಂದ ಎರಡು ಕುಟುಂಬದಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. ಘಟನಾ ಸ್ಥಳಕ್ಕೆ ಸೋಮವಾರಪೇಟೆ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave A Reply

Your email address will not be published.