ಮೂರು ಹಸುಗಳ ಮೇಲೆ ನಡೆದ ಗುಂಡಿನ ದಾಳಿ

ಕಾಡಿನಲ್ಲಿ ಮೇಯಲು ಬಿಟ್ಟಿದ ಮೂರು ಹಸುಗಳ ಮೇಲೆ ಗುಂಡಿನ ದಾಳಿ ನಡೆಸಿ ಆ ನಂತರ ಕೊರಳ ಕೊಯ್ದಿರುವ ಘಟನೆ ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಹೆಬ್ಬಾಲೆ ದೇವರಪುರದ ಎಸ್ಟೇಟ್ ನಲ್ಲಿ ನಡೆದಿದೆ.

ಕಾಡಿನಲ್ಲಿ ಮೂರು ಹಸುಗಳ ಮೃತದೇಹ ದೊರೆತಿದ್ದು, ಅವುಗಳ ಮೇಲೆ ಗುಂಡು ಹಾರಿಸಲಾಯಿತು. ಅಲ್ಲದೇ ಹಸುಗಳ ಕುತ್ತಿಗೆಯನ್ನು ಕತ್ತರಿಸಲಾಗಿದೆ.

ಮಾಂಸಕ್ಕಾಗಿ ಈ ಕೃತ್ಯ ನಡೆಸಲಾಗಿದೆ ಎಂದು ಹೇಳಲಾಗುತ್ತಿದೆ. ಆದರೆ ಕೊಲೆಗಡುಕರು ಮೃತದೇಹಗಳನ್ನು ಸ್ಥಳದಲ್ಲೇ ಬಿಟ್ಟು ಹೋಗಿರುವುದು ಆಶ್ಚರ್ಯ ಮೂಡಿಸಿದೆ. ರಮೇಶ್ ಸಾಬು ಗಣಪತಿ ಮತ್ತು ಎರವರ ಚುಬ್ರ ಅವರಿಗೆ ಸೇರಿದ ಹಸುಗಳು ಇವಾಗಿವೆ.

ಈ ರೀತಿಯ ಕೃತ್ಯ ಮಾಡಿರುವ ದುಷ್ಕರ್ಮಿಗಳ ಪತ್ತೆಗೆ ಸ್ಥಳೀಯರು ಒತ್ತಾಯಿಸಿದ್ದಾರೆ. ಪ್ರಕರಣ ಸಂಬಂಧ ಪೋನ್ನಂಪೇಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Leave A Reply

Your email address will not be published.