ಕಾಸರಗೋಡಿನಲ್ಲಿ ಕಾರ್ಮಿಕನ ಕೊಲೆ , ಆರೋಪಿ ಬಾಗಲಕೋಟೆಯ ವ್ಯಕ್ತಿಯ ಬಂಧನ

ಕರ್ನಾಟಕ ಮೂಲದ ಕಾರ್ಮಿಕನೋರ್ವನನ್ನು ಕೊಲೆಗೈದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಾಗಲಕೋಟೆ ನಿವಾಸಿಯೋರ್ವನನ್ನು ಕಾಸರಗೋಡು ಜಿಲ್ಲೆಯ ಬೇಕಲ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ವ್ಯಕ್ತಿಯನ್ನು ಬಾಗಲಕೋಟೆಯ ಉಮೇಶ್ ಗೌಡ (37) ಎಂದು ಗುರುತಿಸಲಾಗಿದೆ.

ಕೊಲೆಗೀಡಾದ ಕಾರ್ಮಿಕ ಕರ್ನಾಟಕ ನಿವಾಸಿಯಾಗಿದ್ದು, ಈತನ ಗುರುತು ಪತ್ತೆಯಾಗಿಲ್ಲ. ಹೆಸರು ಮತ್ತು ವಿಳಾಸ ಪತ್ತೆಯಾಗದ ಹಿನ್ನಲೆಯಲ್ಲಿ ಮೃತದೇಹವನ್ನು ಮರಣೋತ್ತರ ಪರೀಕ್ಷೆ ಬಳಿಕ ಕಣ್ಣೂರು ವೈದ್ಯಕೀಯ ಕಾಲೇಜು ಆಸ್ಪತ್ರೆಯ ಶವಗಾರದಲ್ಲಿ ಇಡಲಾಗಿದೆ.

ಇವರು ಕೆಲ ಸಮಯದಿಂದ ಬೇಕಳ ಕೋಟಿಕುಳಂ ಪರಿಸರದಲ್ಲಿ ಕಾರ್ಮಿಕನಾಗಿ ಕೆಲಸ ಮಾಡಿ ಜೀವನ ಮಾಡುತ್ತಿದ್ದು,ರಾತ್ರಿ ರೈಲ್ವೆ ಪ್ಲಾಟ್ ಫಾರ್ಮ್ ಅಥವಾ ಬಸ್ಸು ನಿಲ್ದಾಣಗಳಲ್ಲಿ ಮಲಗುತ್ತಿದ್ದರು ಎನ್ನಲಾಗಿದೆ.

ಎಪ್ರಿಲ್ 14 ರಂದು ಉಮೇಶ್ ಗೌಡ ಮತ್ತು ಈ ಕೂಲಿ ಕಾರ್ಮಿಕನ ನಡುವೆ ಜಗಳವಾಗಿದ್ದು, ಕೊಲೆಯಲ್ಲಿ ಕೊನೆಗೊಂಡಿದೆ.

ಎ.15 ರಂದು ಬೆಳಗ್ಗೆ ಕೋಟಿಕುಳಂ ಮಸೀದಿ ಸಮೀಪದ ಅಂಗಡಿ ವರಾಂಡದಲ್ಲಿ ಮೃತದೇಹ ಪತ್ತೆಯಾಗಿದೆ.

ಇದಕ್ಕಾಗಿ ಪೊಲೀಸರು ಸಮೀಪದ ಸಿಸಿಟಿವಿ ಕ್ಯಾಮರಾ ವನ್ನು ಪೊಲೀಸರು ಪರಿಶೀಲನೆ ನಡೆಸಿದಾಗ ಶವವೊಂದನ್ನು ಗೋಣಿ ಚೀಲವೊಂದರಲ್ಲಿ ಮಲಗಿಸಿ ಓರ್ವ ಎಳೆದುಕೊಂಡು ಹೋಗುತ್ತಿರುವುದು ಪತ್ತೆಯಾಗಿದೆ. ಈ ಸಂಬಂಧ ತನಿಖೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ.

Leave A Reply

Your email address will not be published.