ಕೆಯ್ಯೂರು: ಬಾವಿಗೆ ಹಾರಿ ಯುವಕ ಆತ್ಮಹತ್ಯೆ

ಪುತ್ತೂರು ತಾಲೂಕಿನ ಕೆಯ್ಯೂರು ಗ್ರಾಮದ ಕಾಪುತ್ತಡ್ಕಎಂಬಲ್ಲಿ ಯುವಕನೊರ್ವ ಸರಕಾರಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿರುವ ಘಟನೆ ಎ.19ರಂದು ಬೆಳಕಿಗೆ ಬಂದಿದೆ.

ಪಲ್ಲತ್ತಡ್ಕ ನಿವಾಸಿ ಬೇಡು ಎಂಬವರ ಪುತ್ರ ಚಂದ್ರ ಶೇಖರ್ (19 ವ.) ಆತ್ಮಹತ್ಯೆ ಮಾಡಿಕೊಂಡವರು.

ಕೂಲಿ ಕೆಲಸ ಮಾಡುತ್ತಿದ್ದ ಈತನು ಆತ್ಮಹತ್ಯೆಗೆ ಮಾಡಿಕೊಳ್ಳಲು ಕಾರಣ ಏನೆಂದು ತಿಳಿದುಬಂದಿಲ್ಲ.

ಘಟನಾ ಸ್ಥಳಕ್ಕೆ ಸಂಪ್ಯ ಪೊಲೀಸ್ ಠಾಣೆ ಸಿಬ್ಬಂದಿಗಳು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Leave A Reply

Your email address will not be published.