ಸಾಲೆತ್ತೂರು : ದ್ವಿಚಕ್ರ ವಾಹನಗಳ ನಡುವೆ ಅಪಘಾತ , ಮೂವರು ಗಂಭೀರ

ಬಂಟ್ವಾಳ ತಾಲೂಕಿನ ವಿಟ್ಲ ಸಾಲೆತ್ತೂರು ರಸ್ತೆಯ ಚರ್ಚ್ ಬಳಿ ಎರಡು ದ್ವಿಚಕ್ರ ವಾಹನಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಮೂವರು ಗಂಭೀರ ಗಾಯಗೊಂಡ ಘಟನೆ ನಡೆದಿದೆ.

ಆ್ಯಕ್ಟೀವಾದಲ್ಲಿ ಸಂಚರಿಸುತ್ತಿದ್ದ ನೀರಕಣಿ ನಿವಾಸಿಗಳಾದ ಸಮದ್ ಮತ್ತು ಅಫ್ನಾಝ್ ಎಂಬವರು ಹಾಗೂ ಮತ್ತೊಂದು ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಿದ್ದ ಚಂದಳಿಕೆ ನಿವಾಸಿ ಧೂಮಣ್ಣ ಗೌಡ ಎಂಬವರು ಗಂಭೀರ ಗಾಯಗೊಂಡಿದ್ದಾರೆ.

ಪೈಕಿ ಅಫ್ನಾಝ್‌ನ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ.

ನಿನ್ನೆ ಸಂಜೆ ವೇಳೆ ಸಮದ್ ಜತೆ ಅಫ್ನಾಝ್ ವಿಟ್ಲ ಪೇಟೆಗೆ ಬಂದು ಮನೆಗೆ ಹಿಂದಿರುಗುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ.

ಅಫ್ನಾಝ್‌ನನ್ನು ಮಂಗಳೂರು ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದು ಬಂದಿದೆ.

Leave A Reply

Your email address will not be published.