ಪರೀಕ್ಷೆಯಲ್ಲಿ ಅನುತ್ತೀರ್ಣ | ಆಯುರ್ವೇದ ವೈದ್ಯಕೀಯ ವಿದ್ಯಾರ್ಥಿನಿ ಬಾವಿಗೆ ಹಾರಿ ಆತ್ಮಹತ್ಯೆ

ಒಂದು ವಿಷಯದಲ್ಲಿ ಅನುತ್ತೀರ್ಣಗೊಂಡ ಕಾರಣಕ್ಕೆ ಮನನೊಂದ ಆಯುರ್ವೇದ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿ ಜಿಲ್ಲೆಯ ಬೈಂದೂರಿನಲ್ಲಿ ನಡೆದಿದೆ.

DAILY PRIZE DRAW
23:59:59
Daily Prize
Enter Now and Earn $50
View this ad to enter today's drawing
1,453 entries today

ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯನ್ನು ರಕ್ಷಿತಾ (22) ಎಂದು ಗುರುತಿಸಲಾಗಿದೆ

ಈಕೆ ಉದ್ಯಾವರ ಆಯುರ್ವೇದ ಕಾಲೇಜಿನಲ್ಲಿ ಅಂತಿಮ ವರ್ಷದ ಬಿ.ಇ.ಎಮ್.ಎಸ್ ಕಲಿಯುತ್ತಿದ್ದರು.

ವಾರದ ಹಿಂದೆ ಅಂತಿಮ ವರ್ಷದ ಬಿ.ಇ.ಎಮ್.ಎಸ್ ವ್ಯಾಸಂಗ ಮುಗಿಸಿ ಮನೆಗೆ ಬಂದಿದ್ದ ಇವರು ಬಿ.ಇ ಎಮ್.ಎಸ್ ಅಂತಿಮ ವರ್ಷದ ಫಲಿತಾಂಶವನ್ನು ಆನ್ ಲೈನ್ ನಲ್ಲಿ ನೋಡಿದ್ದಳು.

ಫಲಿತಾಂಶದಲ್ಲಿ ಒಂದು ವಿಷಯದಲ್ಲಿ ಅನುತ್ತೀರ್ಣಗೊಂಡಿದ್ದು, ಇದರಿಂದ ಮನನೊಂದು ಆಕೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave A Reply

Your email address will not be published.